ಬ್ರೇಕಿಂಗ್ ನ್ಯೂಸ್
31-05-24 02:10 am Bengaluru Correspondent ಕ್ರೈಂ
ಬೆಂಗಳೂರು, ಮೇ 31: ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಕಡೆಗೂ ಸೆರೆಯಾಗಿದ್ದಾರೆ. ಕಳೆದೊಂದು ತಿಂಗಳಿಂದ ವಿದೇಶದಲ್ಲಿ ಭೂಗತರಾಗಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಪ್ರಜ್ವಲ್, ಗುರುವಾರ ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮರು ಕ್ಷಣವೇ ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ.
ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊಗಳು ಬಹಿರಂಗವಾದ ಬೆನ್ನಲ್ಲೇ ಏ.26ರಂದು ರಾತ್ರೋರಾತ್ರಿ ಜರ್ಮನಿಗೆ ಪಲಾಯನ ಮಾಡಿದ್ದ ಪ್ರಜ್ವಲ್, 34 ದಿನಗಳಿಂದ ಭೂಗತರಾಗಿದ್ದರು. ದುಬೈ, ಲಂಡನ್, ಜರ್ಮನಿಗೆ ವಾಸ್ತವ್ಯ ಬದಲಿಸಿದ್ದ ಅವರು, ಮೇ 27ರಂದು ವಿದೇಶದಿಂದಲೇ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿ, ಶುಕ್ರವಾರ (ಮೇ 31) ರಾಜ್ಯಕ್ಕೆ ಮರಳಿ ಎಸ್ಐಟಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು.
ಇದರ ಬೆನ್ನಲ್ಲೇ ಜರ್ಮನಿಯ ಮ್ಯೂನಿಚ್ನಿಂದ ಗುರುವಾರ ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್ ಬುಕ್ಕಿಂಗ್ ಮಾಡಿದ್ದರು. ಲುಫ್ತಾನ್ಸಾ ಏರ್ಲೈನ್ಸ್ ವಿಮಾನದಲ್ಲಿ(ಎಲ್ ಎಚ್ 764) ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಕಾಯ್ದಿರಿಸಿದ್ದರು. ಭಾರತೀಯ ಕಾಲಮಾನದ ಪ್ರಕಾರ ಸಂಜೆ 4.05ಕ್ಕೆ ಮ್ಯೂನಿಚ್ನಿಂದ ಹೊರಟ ಆ ವಿಮಾನ ತಡರಾತ್ರಿ 12. 50 ಕ್ಕೆ ಬೆಂಗಳೂರಿನ ಕೆಐಎಎಲ್ಗೆ ಬಂದಿತು.
ಪ್ರಜ್ವಲ್ರ ಬಂಧನದ ಹಿನ್ನೆಲೆಯಲ್ಲಿಯಾವುದೇ ಸಮಸ್ಯೆಯಾಗದಂತೆ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಅವರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರೊಂದಿಗೆ ಬೆಳಗ್ಗೆ ಸಭೆ ನಡೆಸಿದ್ದರು. ಎಸ್ಐಟಿ ಅಧಿಕಾರಿಗಳ ಮನವಿಯಂತೆ ಕೆಐಎಎಲ್ ಬಳಿ ಭದ್ರತೆಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.
Janata Dal (Secular) leader Prajwal Revanna, who is accused of sexually abusing numerous women, returned to India on the intervening night of Thursday around 1:15am from Berlin, Germany, nearly a month after leaving the country on a diplomatic passport. He was immediately taken into custody.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm