ಬ್ರೇಕಿಂಗ್ ನ್ಯೂಸ್
02-06-24 05:00 pm Udupi Correspondent ಕ್ರೈಂ
ಉಡುಪಿ, ಜೂನ್ 2: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಕುಳಿತು ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.
ಕಾರಿನಲ್ಲಿದ್ದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್, ಶ್ರೀಪತಿ ಫರಂಗಿಪೇಟೆ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿಯಿಂದ ಕಾಪು ಕಡೆಗೆ ಬರುತ್ತಿದ್ದ ಕಾಪು ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಜಯಶ್ರೀ ಮಾನೆ ಅವರು ಉದ್ಯಾವರ ಸೇತುವೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸ್ಕಾರ್ಪಿಯೋ ಕಾರು ನಿಂತಿರುವುದನ್ನು ಗಮನಿಸಿದ್ದರು. ಸ್ಕಾರ್ಪಿಯೋ ಕಾರನ್ನು ನಿಲ್ಲಿಸಿ ಪರಿಶೀಲಿಸಲು ಯತ್ನಿಸಿದಾಗ ಆರೋಪಿಗಳು ಕಾರನ್ನು ಏಕಾಏಕಿ ಚಲಾಯಿಸಿ ಕಾಪು ಕಡೆಗೆ ತೆರಳಿದ್ದರು.
ಜಯಶ್ರೀ ಮಾನೆ ಅವರು ತಕ್ಷಣ ಈ ಬಗ್ಗೆ ಕಾಪು ಮತ್ತು ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದು ಬಳಿಕ ಕಾಪು ಎಸ್ಸೈ ಅಬ್ದುಲ್ ಖಾದರ್ ನೇತೃತ್ವದ ತಂಡ ಕೋತಲಕಟ್ಟೆ ಎಂಬಲ್ಲಿ ಸ್ಕಾರ್ಪಿಯೋ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಪು ಸಿಐ ಜಯಶ್ರೀ ಮಾನೆ ಮತ್ತು ಕಾಪು ಎಸ್ಐ ಅಬ್ದುಲ್ ಖಾದರ್ ಹಾಗೂ ಸಿಬ್ಬಂದಿ ಸ್ಕಾರ್ಪಿಯೋದಲ್ಲಿ ಇದ್ದವರನ್ನು ವಶಕ್ಕೆ ಪಡೆದು ವಾಹನ ಪರಿಶೀಲಿಸಿದಾಗ ದರೋಡೆಗೆ ಹೊಂಚು ಹಾಕುತ್ತಿರುವ ವಿಚಾರ ಬೆಳಕಿಗೆ ಬಂದಿತ್ತು. ಸ್ಕಾರ್ಪಿಯೋ ಕಾರಿನಲ್ಲಿ ಡ್ರ್ಯಾಗನ್, ಚೂರಿ, ಕಬ್ಬಿಣದ ಪೈಪ್ ಮತ್ತು ಮರಳು ಮಿಶ್ರಿತ ಮೆಣಸಿನ ಪುಡಿಯನ್ನು ಪತ್ತೆ ಹಚ್ಚಿದ್ದು, ಪೊಲೀಸರು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೊಳಪಡಿಸಿದ್ದಾರೆ.
Udupi Six arrested for suspected criminal activity, illegal possession of weapons seized by Kapu police. According to a complaint filed by Circle Inspector Jayashree Mane at Kaup police station, six persons traveling in a Scorpio were found suspicious near the Udyavar bridge while heading towards Mangaluru. The police signaled them to pull over by honking, but they refused and continued driving dangerously. The police, with the assistance of Abdul Khader, S
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am