ಬ್ರೇಕಿಂಗ್ ನ್ಯೂಸ್
03-06-24 11:41 am Udupi Correspondent ಕ್ರೈಂ
ಉಡುಪಿ, ಜೂ. 03: ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಾರಿನಲ್ಲಿ ನಿರಂತರ ಅತ್ಯಾಚಾರ ಮಾಡಿರೋ ಪ್ರಕರಣ ದಾಖಲಾಗಿದೆ.
ಅಷ್ಟೇ ಅಲ್ಲ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಪರಾರಿ ಆಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೈಬೈಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
25 ವರ್ಷದ ಉದ್ಯಮಿ ಶ್ರೇಯಸ್ ನಾಯ್ಕ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದ ಮೇ 18ರಂದು ಪ್ರಕರಣ ದಾಖಲಾಗಿದ್ದು, ಶ್ರೇಯಸ್ ನಾಯ್ಕ್ ತಲೆಮರೆಸಿಕೊಂಡಿದ್ದಾನೆ.
ಶಾಲೆಗೆ ಹೋಗುವ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಶ್ರೇಯಸ್ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನ ವಿಡಿಯೋ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.
ಈಗ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಬಾಲಕಿಯನ್ನು ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ಎಸಗಿ ಅದರ ವಿಡಿಯೋ ಮಾಡಿ ಬಾಲಕಿಯನ್ನ ಹೆದರಿಸಿ ಪದೇ ಪದೇ ಅತ್ಯಾಚಾರ ಎಸಗುತ್ತಿದ್ದ ಆರೋಪ ಕೇಳಿಬಂದಿದೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಈಗ ಬೆಳಕಿಗೆ ಬಂದಿದೆ.
ತಲೆಮರೆಸಿಕೊಂಡಿರುವ ಶ್ರೇಯಸ್ಗಾಗಿ ಕುಂದಾಪುರ ತಾಲೂಕಿನ ಅಮಾಸೈಬೈಲ್ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಸೈಬರ್ ಪೊಲೀಸರು ಆರೋಪಿ ಮನೆಯಿಂದ ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಲ್ಯಾಪ್ಟಾಪ್ಗೆ ಪಾಸ್ವರ್ಡ್ ಹಾಕಿದ್ದು, ವಿಡಿಯೋಗಳನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
ಮೇ18 ರಂದು ಆರೋಪಿ ಶ್ರೇಯಸ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶ್ರೇಯಸ್ಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ.
Kundapur 23 year old Shreyas a businessman runs after rape complaint filed, it is alleged that he was targetting school girls Take them in car and then have sex with them.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm