ಬ್ರೇಕಿಂಗ್ ನ್ಯೂಸ್
05-06-24 01:56 pm HK News Desk ಕ್ರೈಂ
ಹಾಸನ, ಜೂ 05: ಬೆಳ್ಳಂಬೆಳಗ್ಗೆ ನಟೋರಿಯಸ್ ರೌಡಿ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೇಮಾವತಿನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ಕುಡಿಯುವ ನೀರು ತರಲು ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ರವಿಗೆ ಹಿಂದಿನಿಂದ ವಾಹನ ಡಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ ದುಷ್ಕರ್ಮಿಗಳು, ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಇಬ್ಬರು ದುಷ್ಕರ್ಮಿಗಳು ತಪ್ಪಿಸಿಕೊಳ್ಳಲು ಅವಕಾಶವೇ ಸಿಗದಂತೆ ದಾಳಿ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವೈಯಕ್ತಿಕ ಸೇಡಿನಿಂದ ಹತ್ಯೆ ನಡೆದಿದೆ ಎನ್ನಲಾಗಿದೆ.
ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ ಸೇರಿದಂತೆ ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದ. ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ನಿವಾಸದ ಕೂಗಳತೆ ದೂರದಲ್ಲಿಯೇ ಬೆಳ್ಳಂಬೆಳಗ್ಗೆ ನಡೆದ ಹತ್ಯೆಯಿಂದ ಹೇಮಾವತಿನಗರ ಬಡಾವಣೆ ಜನರು ಆತಂಕಗೊಂಡಿದ್ದಾರೆ.
ಚೈಲ್ಡ್ ರವಿಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಸುತ್ತಮುತ್ತಲು ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಆತನ ಬೈಕ್ಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ ಕೃತ್ಯ ಎಸಗಿದ್ದಾರೆ. ವಾಕಿಂಗ್ ಮಾಡುತ್ತಿದ್ದ ಜನರು, ಸಾರ್ವಜನಿಕರು ಹಾಗೂ ಶಾಲೆಗೆ ಹೋಗಲು ಬಸ್ಗಾಗಿ ಸ್ವಲ್ಪ ದೂರದಲ್ಲಿ ಮಕ್ಕಳು ಕಾಯುತ್ತಾ ನಿಂತಿರುವಾಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಘಟನೆ ಕಂಡು ಎಲ್ಲರೂ ಭಯಭೀತರಾಗಿದ್ದಾರೆ.
ಪೆನ್ಷನ್ ಮೊಹಲ್ಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಂತಕರ ಹುಡುಕಾಟಕ್ಕೆ ಈಗಾಗಲೇ ಹಾಸನ ಎಸ್ಪಿ ಮಹಮದ್ ಸುಜೀತ್ ಎರಡು ತಂಡ ರಚನೆ ಮಾಡಿದ್ದು, ತನಿಖೆ ಮುಂದುವರೆದಿದೆ.
Hassan notorious rowdy child Ravi brutally murdered in broad daylight in Hassan. Early morning miscreants in car rammed his bike and brutally killed child Ravi on June 5th early morning.
18-10-24 10:57 pm
Bangalore Correspondent
Big boss Kannada, Colours: ಬಿಗ್ ಬಾಸ್ ಶೋಗೆ ಮತ್...
18-10-24 05:32 pm
ನಾಗೇಂದ್ರ ವಂಚನೆ ಮಾಡಿರೋದನ್ನ ಕಿರುಪುಸ್ತಕ ಮಾಡಿ ಹಂಚ...
18-10-24 04:12 pm
Pralhad Joshi, BJP, Ticket fraud: ಲೋಕಸಭೆ ಟಿಕೆ...
18-10-24 04:00 pm
Vijaypur, Baby dies pit: ಚರಂಡಿಗೆ ಬಿದ್ದು ಎರಡು...
17-10-24 05:29 pm
17-10-24 11:16 am
HK News Desk
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
Actor Sanjay Dutt Mangalore,Baba Siddique; ಬಾ...
13-10-24 06:13 pm
ಮೈಸೂರು ದರ್ಭಾಂಗ್ ಬಾಗಮತಿ ಎಕ್ಸ್ ಪ್ರೆಸ್ ರೈಲು ಅಪಘಾ...
13-10-24 03:48 pm
18-10-24 09:34 pm
Mangalore Correspondent
By Election date, Mangalore: ಅ.21ರಂದು ದಕ್ಷಿಣ...
18-10-24 05:55 pm
Mangalore, Puttur forest officer: ಪುತ್ತೂರು ಡಿ...
18-10-24 05:00 pm
Tvs scooty fire, Kumpala, Mangalore: ತನ್ನಷ್ಟಕ...
18-10-24 02:12 pm
Mangalore Ullal News, Assult: ಉಳ್ಳಾಲ ಠಾಣೆಯಲ್ಲ...
17-10-24 10:29 pm
18-10-24 03:11 pm
Bangalore Correspondent
Mangalore cyber fraud, share market, crime: ಅ...
17-10-24 11:03 pm
Bangalore crime, Double Murder, Illecit affai...
17-10-24 08:02 pm
Fake Aadhar, Mangalore Fraud, Crime: ಹತ್ತು ಸಾ...
16-10-24 02:44 pm
Chikkamagaluru, Online Fraud: ಹಣ ಡಬಲ್ ಆಸೆಗೆ...
15-10-24 09:56 pm