ಬ್ರೇಕಿಂಗ್ ನ್ಯೂಸ್
05-06-24 01:56 pm HK News Desk ಕ್ರೈಂ
ಹಾಸನ, ಜೂ 05: ಬೆಳ್ಳಂಬೆಳಗ್ಗೆ ನಟೋರಿಯಸ್ ರೌಡಿ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೇಮಾವತಿನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ಕುಡಿಯುವ ನೀರು ತರಲು ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ರವಿಗೆ ಹಿಂದಿನಿಂದ ವಾಹನ ಡಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ ದುಷ್ಕರ್ಮಿಗಳು, ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಇಬ್ಬರು ದುಷ್ಕರ್ಮಿಗಳು ತಪ್ಪಿಸಿಕೊಳ್ಳಲು ಅವಕಾಶವೇ ಸಿಗದಂತೆ ದಾಳಿ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವೈಯಕ್ತಿಕ ಸೇಡಿನಿಂದ ಹತ್ಯೆ ನಡೆದಿದೆ ಎನ್ನಲಾಗಿದೆ.
ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ ಸೇರಿದಂತೆ ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದ. ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ನಿವಾಸದ ಕೂಗಳತೆ ದೂರದಲ್ಲಿಯೇ ಬೆಳ್ಳಂಬೆಳಗ್ಗೆ ನಡೆದ ಹತ್ಯೆಯಿಂದ ಹೇಮಾವತಿನಗರ ಬಡಾವಣೆ ಜನರು ಆತಂಕಗೊಂಡಿದ್ದಾರೆ.
ಚೈಲ್ಡ್ ರವಿಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಸುತ್ತಮುತ್ತಲು ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಆತನ ಬೈಕ್ಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ ಕೃತ್ಯ ಎಸಗಿದ್ದಾರೆ. ವಾಕಿಂಗ್ ಮಾಡುತ್ತಿದ್ದ ಜನರು, ಸಾರ್ವಜನಿಕರು ಹಾಗೂ ಶಾಲೆಗೆ ಹೋಗಲು ಬಸ್ಗಾಗಿ ಸ್ವಲ್ಪ ದೂರದಲ್ಲಿ ಮಕ್ಕಳು ಕಾಯುತ್ತಾ ನಿಂತಿರುವಾಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಘಟನೆ ಕಂಡು ಎಲ್ಲರೂ ಭಯಭೀತರಾಗಿದ್ದಾರೆ.
ಪೆನ್ಷನ್ ಮೊಹಲ್ಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಂತಕರ ಹುಡುಕಾಟಕ್ಕೆ ಈಗಾಗಲೇ ಹಾಸನ ಎಸ್ಪಿ ಮಹಮದ್ ಸುಜೀತ್ ಎರಡು ತಂಡ ರಚನೆ ಮಾಡಿದ್ದು, ತನಿಖೆ ಮುಂದುವರೆದಿದೆ.
Hassan notorious rowdy child Ravi brutally murdered in broad daylight in Hassan. Early morning miscreants in car rammed his bike and brutally killed child Ravi on June 5th early morning.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 09:07 pm
HK News Desk
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm