ಬ್ರೇಕಿಂಗ್ ನ್ಯೂಸ್
05-06-24 09:26 pm Bangalore Correspondent ಕ್ರೈಂ
ಬೆಂಗಳೂರು, ಜೂ 05: ಗಂಡ- ಹೆಂಡತಿ ಜಗಳ ಆಕಸ್ಮಿಕವಾಗಿ ಮಗನ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ಜರಗನಹಳ್ಳಿಯಲ್ಲಿ ನಡೆದಿದೆ.
ಇನ್ಫೋಸಿಸ್ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ.
ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಸರ್ಜಾಪುರ ಸಮೀಪದ ಮ್ಯಾಟ್ರಿಕ್ಸ್ ಎಂಬ ಕಂಪನಿಯಲ್ಲಿ ಯಶವಂತ್ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ.
ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ. ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ.
ಯಶವಂತ ಉತ್ತಮ ವ್ಯಕ್ತಿತ್ವ ಹೊಂದಿದ್ದ ಹುಡುಗ. ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಂಜಿನಿಯರ್ ವೃತ್ತಿ ಮಾಡುತ್ತ, ತಂದೆ ಮಾಡಿದ್ದ ಸಾಲ ಸಹ ತೀರಿಸುತ್ತಿದ್ದ. ಆತನ ಆಸೆಯಂತೆ ಕುಟುಂಬಸ್ಥರು ಯಶವಂತನ ಕಣ್ಣುಗಳನ್ನು ದಾನ ಮಾಡಿದ್ದಾರೆ” ಎಂದು ಸಂಬಂಧಿ ರಾಕೇಶ್ ಮಾಹಿತಿ ನೀಡಿದ್ದಾರೆ.
ಸದ್ಯ ಆರೋಪಿ ತಂದೆ ಬಸವರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. “ಪುಟ್ಟೇನಹಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ 23 ವರ್ಷದ ಯುವಕನ ಕೊಲೆಯಾಗಿದೆ. ಗಂಡ ಹೆಂಡತಿ ಹೊಡೆದಾಡುತ್ತಿದ್ದಾಗ ಬಿಡಿಸಲು ಹೋಗಿದ್ದಾನೆ. ಈ ವೇಳೆ ತಂದೆ ಚಾಕು ತಂದು ಹೆದರಿಸಲು ಹೋಗಿದ್ದ. ಯುವಕ ಆಸ್ಪತ್ರೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ” ಎಂದು ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.
23 year old software engineer stabbed by father during fight at home in Bangalore. The diseased has been identified as Yashwant. His father and mother were fighting over looking after their grandmother who is sick, during which when son came to stop the fight he was stabbed by his father.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm