ಬ್ರೇಕಿಂಗ್ ನ್ಯೂಸ್
05-06-24 10:32 pm Mangaluru Correspondent ಕ್ರೈಂ
ಉಳ್ಳಾಲ, ಜೂ.5: ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆ ಮಂಗಳವಾರ ಸಂಜೆ ಕುಂಪಲದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದ ಬಿಜೆಪಿ ಕಾರ್ಯಕರ್ತನ ತಲೆಗೆ ಕಬ್ಬಿಣದ ಸಲಾಕೆಯಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಘಟನೆ ಕುಂಪಲ ಬಾರ್ದೆ ಎಂಬಲ್ಲಿ ಬುಧವಾರ ಸಂಜೆ ನಡೆದಿದ್ದು, ಆರೋಪಿಯನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕುಂಪಲ ಮೂರುಕಟ್ಟ , ಪಲ್ಲ ನಿವಾಸಿ ಬಿಜೆಪಿ ಕಾರ್ಯಕರ್ತ ಪಿಟ್ಟಿ ಯಾನೆ ಪ್ರವೀಣ್ ಪೂಜಾರಿ(35) ಹಲ್ಲೆಗೊಳಗಾದ ಯುವಕ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕೇಂದ್ರದಲ್ಲಿ ಮೋದಿ ನೇತೃತ್ವದ ಎನ್ ಡಿಎ ಬಹುಮತ ಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಪೂಜಾರಿ ಮತ್ತು ಸ್ನೇಹಿತರು ಮಂಗಳವಾರ ಸಂಜೆ ಕುಂಪಲ ಸರಕಾರಿ ಶಾಲೆಯ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಪಟಾಕಿ ಸಿಡಿಸಿದ್ದ ಪ್ರದೇಶದಲ್ಲಿ ಸ್ಥಳೀಯ ಸಂಘ ಸಂಸ್ಥೆಯೊಂದರ ಕಾರ್ಯಾಲಯ ಇದ್ದು ,ಅವರ ಕಚೇರಿ ಮುಂದೆ ಪಟಾಕಿ ಸಿಡಿಸಿದ್ದರ ವಿರುದ್ಧ ಸಂಸ್ಥೆಯ ಸದಸ್ಯರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತನೆನ್ನಲಾದ, ಹಲ್ಲೆಗೊಳಗಾದ ಪ್ರವೀಣ್ ಅವರ ನೆರೆಮನೆಯ ಗೌತಮ್ ಬುಧವಾರ ಸಂಜೆ ಕುಂಪಲ ಬಾರ್ದೆ ಎಂಬಲ್ಲಿ ಪ್ರವೀಣ್ ಮೇಲೆ ದಾಳಿ ನಡೆಸಿದ್ದಾನೆ. ಕಾರಿನಲ್ಲಿ ಬಂದ ಗೌತಮ್ ಪ್ರವೀಣ್ಗೆ ಅವಾಚ್ಯವಾಗಿ ನಿಂದಿಸಿ ಕಬ್ಬಿಣದ ರಾಡ್ ನಿಂದ ತಲೆಗೆ ಹಲ್ಲೆಗೈದು ಮೊಬೈಲನ್ನ ಪುಡಿಗೈದಿದ್ದಾನೆ. ಗಂಭೀರ ಗಾಯಗೊಂಡ ಪ್ರವೀಣ್ ಅವರನ್ನ ಸ್ಥಳೀಯರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಪ್ರವೀಣ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಳ್ಳಾಲ ಪೊಲೀಸರು ಆರೋಪಿ ಗೌತಮ್ ನನ್ನ ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಭೇಟಿ ನೀಡಿದ್ದು ಹಲ್ಲೆಗೊಳಗಾದ ಪ್ರವೀಣ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಕಾಂಗ್ರೆಸಿಗರು ಅಧಿಕಾರದ ಅಮಲಿನಲ್ಲಿ ಅಟ್ಟಹಾಸ ಮೆರೆಯುತ್ತಿದ್ದು ಅಮಾಯಕ ಬಿಜೆಪಿ ಕಾರ್ಯಕರ್ತರ ಮೇಲೆ ಎರಗಿ ಹಲ್ಲೆಗೈಯುತ್ತಿರುವುದು ಖಂಡನೀಯ. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಆರೋಪಿ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಬಿಜೆಪಿ ಉಗ್ರವಾಗಿ ಪ್ರತಿಭಟಿಸುವುದಾಗಿ ರವೀಂದ್ರ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಮಂಗಳೂರು ಮಂಡಲದ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಪ್ರಮುಖರಾದ ಪ್ರಕಾಶ್ ಸಿಂಪೋನಿ, ಜೀವನ್ ಕುಮಾರ್ ತೊಕ್ಕೊಟ್ಟು ಜತೆಯಲ್ಲಿದ್ದರು.
Mangalore Kumpala, a Hindu worker, attacked in a rod for bursting crackers for the BJP win. Some miscenats attacked Praveen Poojari for bursting crakers by celebrating BjP's win in Karnataka.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am