ಬ್ರೇಕಿಂಗ್ ನ್ಯೂಸ್
08-06-24 04:12 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಮದುವೆಯಾಗುತ್ತೇನೆಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ಗರ್ಭಿಣಿಯಾಗಿಸಿದ ಬಗ್ಗೆ ಮತ್ತು ಇನ್ನೊಂದು ಪ್ರಕರಣದಲ್ಲಿ ಮದುವೆಯಾಗುವುದಾಗಿ ನಂಬಿಸಿ ಉದ್ಯೋಗದಲ್ಲಿದ್ದ ಯುವತಿಯನ್ನು ಅತ್ಯಾಚಾರಗೈದ ಘಟನೆ ಬಗ್ಗೆ ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಯುವತಿಯನ್ನು ವಿನೋದ್ರಾಜ್ ಎಂಬಾತ ಪ್ರೀತಿಸುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ. ಮಾ. 23ರಂದು ಯುವತಿ ರಜೆಯ ಕಾರಣ ಮನೆಯಲ್ಲಿದ್ದಾಗ ಆರೋಪಿ ವಿನೋದ್ರಾಜ್ ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಆನಂತರವೂ ಅತ್ಯಾಚಾರ ಎಸಗಿದ್ದು ಈಗ ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳಾ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ.
ಪಕ್ಕದ ಮನೆಯಾತನಿಂದಲೇ ಬಾಲಕಿ ಗರ್ಭಿಣಿ
ಇನ್ನೊಂದು ಪ್ರಕರಣದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನೆರೆಮನೆ ನಿವಾಸಿ ಅತ್ಯಾಚಾರ ಎಸಗಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 14 ವರ್ಷದ ಬಾಲಕಿಯ ಮನೆ ಪಕ್ಕದ ನಿವಾಸಿ ರೋಶನ್ ಎಂಬಾತ, ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿಂದ ಪೊಲೀಸರಿಗೆ ಮಾಹಿತಿ ಹೋಗಿದ್ದು ಪ್ರಕರಣ ದಾಖಲಾಗಿದೆ.
Girl raped of marriage, pregnant girl files complaint at women police station in Mangalore. Two seperate cases have been registered in two different cases.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm