ಬ್ರೇಕಿಂಗ್ ನ್ಯೂಸ್
08-06-24 08:46 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: 19 ವರ್ಷದ ಯುವತಿಯನ್ನು ಖಾಸಗಿ ಬಸ್ಸಿನಲ್ಲಿ ಚುಡಾಯಿಸಿದ್ದಲ್ಲದೆ, ಸೊಂಟಕ್ಕೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ನಾಗುರಿಯ ಎಸ್.ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್ ಸೇಲ್ ಮಾಡುತ್ತಿದ್ದು, ಜೂನ್ 7ರಂದು ಬೆಳಗ್ಗೆ 9.15 ಗಂಟೆಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ ಬಜಪೆ ಕಡೆಗೆ ತೆರಳುವ ಬಸ್ಸಿನಲ್ಲಿ ಹೊರಟಿದ್ದಳು. ಇದೇ ಸಂದರ್ಭದಲ್ಲಿ ಬಜಪೆ ನಿವಾಸಿ ಕಲಂದರ್ ಶಾಫಿ(31) ಎಂಬ ಯುವಕ ಹಿಂಬಾಲಿಸಿಕೊಂಡು ಯುವತಿ ಕುಳಿತುಕೊಂಡಿದ್ದ ಸೀಟಿನ ಹಿಂಬದಿಯಲ್ಲಿ ಕುಳಿತಿದ್ದ. ಆರೋಪಿ ಯುವಕ, ಬಸ್ಸಿನಲ್ಲಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿದ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಕಿರುಚಾಡಿದ್ದು, ಈ ಸಂದರ್ಭದಲ್ಲಿ ಇತರೇ ಸಾರ್ವಜನಿಕರು ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಆನಂತರ, ಬಸ್ ಬಳ್ಳಾಲ್ ಬಾಗ್ ತಲುಪಿದಾಗ ಯುವಕ ಓಡಿ ತಪ್ಪಿಸಲು ಯತ್ನಿಸಿದ್ದು ಆರೋಪಿಯನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಯುವತಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ 354ಎ ಮತ್ತು 354ಡಿ ಅಡಿ ಕೇಸು ದಾಖಲಾಗಿದೆ. ಸಾರ್ವಜನಿಕರು ತನ್ನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.
Mangalore 31 year old thrashed arrested over touching girl and misbehaving in bus. The arrested has been identified as Kalandar Shafi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm