ಬ್ರೇಕಿಂಗ್ ನ್ಯೂಸ್
08-06-24 08:46 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: 19 ವರ್ಷದ ಯುವತಿಯನ್ನು ಖಾಸಗಿ ಬಸ್ಸಿನಲ್ಲಿ ಚುಡಾಯಿಸಿದ್ದಲ್ಲದೆ, ಸೊಂಟಕ್ಕೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ನಾಗುರಿಯ ಎಸ್.ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್ ಸೇಲ್ ಮಾಡುತ್ತಿದ್ದು, ಜೂನ್ 7ರಂದು ಬೆಳಗ್ಗೆ 9.15 ಗಂಟೆಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ ಬಜಪೆ ಕಡೆಗೆ ತೆರಳುವ ಬಸ್ಸಿನಲ್ಲಿ ಹೊರಟಿದ್ದಳು. ಇದೇ ಸಂದರ್ಭದಲ್ಲಿ ಬಜಪೆ ನಿವಾಸಿ ಕಲಂದರ್ ಶಾಫಿ(31) ಎಂಬ ಯುವಕ ಹಿಂಬಾಲಿಸಿಕೊಂಡು ಯುವತಿ ಕುಳಿತುಕೊಂಡಿದ್ದ ಸೀಟಿನ ಹಿಂಬದಿಯಲ್ಲಿ ಕುಳಿತಿದ್ದ. ಆರೋಪಿ ಯುವಕ, ಬಸ್ಸಿನಲ್ಲಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿದ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಕಿರುಚಾಡಿದ್ದು, ಈ ಸಂದರ್ಭದಲ್ಲಿ ಇತರೇ ಸಾರ್ವಜನಿಕರು ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಆನಂತರ, ಬಸ್ ಬಳ್ಳಾಲ್ ಬಾಗ್ ತಲುಪಿದಾಗ ಯುವಕ ಓಡಿ ತಪ್ಪಿಸಲು ಯತ್ನಿಸಿದ್ದು ಆರೋಪಿಯನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಯುವತಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ 354ಎ ಮತ್ತು 354ಡಿ ಅಡಿ ಕೇಸು ದಾಖಲಾಗಿದೆ. ಸಾರ್ವಜನಿಕರು ತನ್ನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.
Mangalore 31 year old thrashed arrested over touching girl and misbehaving in bus. The arrested has been identified as Kalandar Shafi.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm