ಬ್ರೇಕಿಂಗ್ ನ್ಯೂಸ್
09-06-24 04:34 pm HK News Desk ಕ್ರೈಂ
ಮೈಸೂರು, ಜೂ 09: ವಿಚ್ಛೇದಿತ ಮಹಿಳೆ ಜತೆ ಲವ್ವಿ ಡವ್ವಿ ನಡೆಸಿ, ಆಕೆಯನ್ನು ಗರ್ಭಿಣಿ ಮಾಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಯುವಕ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಮಹಿಳೆ ನೀಡಿದ ದೂರಿನ ಮೇರೆಗೆ ನಗರದ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ 34 ವರ್ಷದ ಮಹಿಳೆ ಮೋಸ ಹೋದವರು. ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ, ಕೊಳ್ಳೇಗಾಲದ ತೇರಂಬಳ್ಳಿ ಗ್ರಾಮದ ಹರೀಶ (25) ಎಂಬಾತನ ವಿರುದ್ಧ ದೂರು ನೀಡಿದ್ದಾರೆ.
2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿಯಾಗಿದ್ದಾನೆ. ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಯುವಕ ಪರಾರಿಯಾಗಿದ್ದಾನೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದು, ಇಬ್ಬರೂ ಹವ್ಯಾಸಿ ಹಾಡುಗಾರರು. ಸಿಂಗಿಂಗ್ ಇವೆಂಟ್ಸ್ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯವಾಗಿತ್ತು. ಪರಿಚಯ ಪ್ರೇಮಕ್ಕೆ ತಿರುಗಿ ಪ್ರೀತ್ಸೆ ಎಂದು ದುಂಬಾಲು ಬಿದ್ದಿದ್ದ. ಕೊನೆಗೆ ಯುವಕನ ಒತ್ತಡಕ್ಕೆ ಮಣಿದ ಟೀಚರ್, ಆತನ ಪ್ರೀತಿಯನ್ನು ಒಪ್ಪಿದ್ದರಿಂದ ಮನೆಗೆ ಯುವಕ ಆಗಾಗ್ಗೆ ಬಂದು ಹೋಗುತ್ತಿದ್ದ.
ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ ಎಂದ ಮಹಿಳೆ ;
ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ. ನಂತರ ಆರೋಪಿ ಹರೀಶನ ಮನೆಯವರಿಂದ ಮದುವೆಗೆ ನಿರಾಕರಣೆ ಮಾಡಲಾಗಿದೆ. ನನ್ನ ಮೇಲೆ ಅತ್ಯಾಚಾರ ಮಾಡಿ ಈಗ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ನಾನು ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ. ಪೊಲೀಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ. ಆತ ನನ್ನನ್ನು ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ. ಹೀಗಾಗಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸರ ಬಳಿ ನೊಂದ ಮಹಿಳೆ ಅಂಗಲಾಚಿದ್ದಾರೆ.
ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru 23 year old cheats women of marrige and makes her pregnant case filed. Women has stated that if he marries her will take the case back.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm