ಬ್ರೇಕಿಂಗ್ ನ್ಯೂಸ್
09-06-24 04:34 pm HK News Desk ಕ್ರೈಂ
ಮೈಸೂರು, ಜೂ 09: ವಿಚ್ಛೇದಿತ ಮಹಿಳೆ ಜತೆ ಲವ್ವಿ ಡವ್ವಿ ನಡೆಸಿ, ಆಕೆಯನ್ನು ಗರ್ಭಿಣಿ ಮಾಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಯುವಕ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಮಹಿಳೆ ನೀಡಿದ ದೂರಿನ ಮೇರೆಗೆ ನಗರದ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ 34 ವರ್ಷದ ಮಹಿಳೆ ಮೋಸ ಹೋದವರು. ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ, ಕೊಳ್ಳೇಗಾಲದ ತೇರಂಬಳ್ಳಿ ಗ್ರಾಮದ ಹರೀಶ (25) ಎಂಬಾತನ ವಿರುದ್ಧ ದೂರು ನೀಡಿದ್ದಾರೆ.
2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿಯಾಗಿದ್ದಾನೆ. ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಯುವಕ ಪರಾರಿಯಾಗಿದ್ದಾನೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದು, ಇಬ್ಬರೂ ಹವ್ಯಾಸಿ ಹಾಡುಗಾರರು. ಸಿಂಗಿಂಗ್ ಇವೆಂಟ್ಸ್ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯವಾಗಿತ್ತು. ಪರಿಚಯ ಪ್ರೇಮಕ್ಕೆ ತಿರುಗಿ ಪ್ರೀತ್ಸೆ ಎಂದು ದುಂಬಾಲು ಬಿದ್ದಿದ್ದ. ಕೊನೆಗೆ ಯುವಕನ ಒತ್ತಡಕ್ಕೆ ಮಣಿದ ಟೀಚರ್, ಆತನ ಪ್ರೀತಿಯನ್ನು ಒಪ್ಪಿದ್ದರಿಂದ ಮನೆಗೆ ಯುವಕ ಆಗಾಗ್ಗೆ ಬಂದು ಹೋಗುತ್ತಿದ್ದ.
ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ ಎಂದ ಮಹಿಳೆ ;
ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ. ನಂತರ ಆರೋಪಿ ಹರೀಶನ ಮನೆಯವರಿಂದ ಮದುವೆಗೆ ನಿರಾಕರಣೆ ಮಾಡಲಾಗಿದೆ. ನನ್ನ ಮೇಲೆ ಅತ್ಯಾಚಾರ ಮಾಡಿ ಈಗ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ನಾನು ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ. ಪೊಲೀಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ. ಆತ ನನ್ನನ್ನು ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ. ಹೀಗಾಗಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸರ ಬಳಿ ನೊಂದ ಮಹಿಳೆ ಅಂಗಲಾಚಿದ್ದಾರೆ.
ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru 23 year old cheats women of marrige and makes her pregnant case filed. Women has stated that if he marries her will take the case back.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm