ಬ್ರೇಕಿಂಗ್ ನ್ಯೂಸ್
09-06-24 04:34 pm HK News Desk ಕ್ರೈಂ
ಮೈಸೂರು, ಜೂ 09: ವಿಚ್ಛೇದಿತ ಮಹಿಳೆ ಜತೆ ಲವ್ವಿ ಡವ್ವಿ ನಡೆಸಿ, ಆಕೆಯನ್ನು ಗರ್ಭಿಣಿ ಮಾಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಯುವಕ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಮಹಿಳೆ ನೀಡಿದ ದೂರಿನ ಮೇರೆಗೆ ನಗರದ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ 34 ವರ್ಷದ ಮಹಿಳೆ ಮೋಸ ಹೋದವರು. ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ, ಕೊಳ್ಳೇಗಾಲದ ತೇರಂಬಳ್ಳಿ ಗ್ರಾಮದ ಹರೀಶ (25) ಎಂಬಾತನ ವಿರುದ್ಧ ದೂರು ನೀಡಿದ್ದಾರೆ.
2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿಯಾಗಿದ್ದಾನೆ. ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಯುವಕ ಪರಾರಿಯಾಗಿದ್ದಾನೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದು, ಇಬ್ಬರೂ ಹವ್ಯಾಸಿ ಹಾಡುಗಾರರು. ಸಿಂಗಿಂಗ್ ಇವೆಂಟ್ಸ್ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯವಾಗಿತ್ತು. ಪರಿಚಯ ಪ್ರೇಮಕ್ಕೆ ತಿರುಗಿ ಪ್ರೀತ್ಸೆ ಎಂದು ದುಂಬಾಲು ಬಿದ್ದಿದ್ದ. ಕೊನೆಗೆ ಯುವಕನ ಒತ್ತಡಕ್ಕೆ ಮಣಿದ ಟೀಚರ್, ಆತನ ಪ್ರೀತಿಯನ್ನು ಒಪ್ಪಿದ್ದರಿಂದ ಮನೆಗೆ ಯುವಕ ಆಗಾಗ್ಗೆ ಬಂದು ಹೋಗುತ್ತಿದ್ದ.
ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ ಎಂದ ಮಹಿಳೆ ;
ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ. ನಂತರ ಆರೋಪಿ ಹರೀಶನ ಮನೆಯವರಿಂದ ಮದುವೆಗೆ ನಿರಾಕರಣೆ ಮಾಡಲಾಗಿದೆ. ನನ್ನ ಮೇಲೆ ಅತ್ಯಾಚಾರ ಮಾಡಿ ಈಗ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ನಾನು ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ. ಪೊಲೀಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ. ಆತ ನನ್ನನ್ನು ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ. ಹೀಗಾಗಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸರ ಬಳಿ ನೊಂದ ಮಹಿಳೆ ಅಂಗಲಾಚಿದ್ದಾರೆ.
ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru 23 year old cheats women of marrige and makes her pregnant case filed. Women has stated that if he marries her will take the case back.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm