ಬ್ರೇಕಿಂಗ್ ನ್ಯೂಸ್
09-06-24 11:09 pm Mangalore Correspondent ಕ್ರೈಂ
ಉಳ್ಳಾಲ, ಜೂ.9: ಮೋದಿ ಪಟ್ಟಾಭಿಷೇಕ ಹಿನ್ನಲೆಯಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ಅನ್ಯಕೋಮಿನ ತಂಡವೊಂದು ಚೂರಿಯಿಂದ ಇರಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ ಹಾಗೂ ನಂದನ್ ಎಂಬವರಿಗೆ ಚೂರಿ ಇರಿಯಲಾಗಿದ್ದು ಗಾಯಾಳುಗಳಿಗೆ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



ಮೋದಿ ಪದಗ್ರಹಣದ ಪ್ರಯುಕ್ತ ವಿಜಯೋತ್ಸವ ಬೋಳಿಯಾರ್ ನಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಹರೀಶ್ ಅಂಚನ್, ಹರೀಶ್ ಅವರ ಭಾವ ವಿನೋದ್ ಮತ್ತು ನಂದನ್ ಎಂಬವರು ವಿಜಯೋತ್ಸವ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಳಿಯಾರಿನ ಸಮಾಧಾನ್ ಬಾರ್ ಮುಂಭಾಗದಲ್ಲಿ ಅನ್ಯಕೋಮಿನ ತಂಡವೊಂದು ಅಡ್ಡಗಟ್ಟಿ ಹರೀಶ್ ಮತ್ತು ನಂದನ್ ಮೇಲೆ ಹಲ್ಲೆಗೈದು ಚೂರಿಯಿಂದ ಇರಿದು ಪರಾರಿಯಾಗಿದೆ ಎನ್ನಲಾಗಿದೆ.
ಹರೀಶ್ ಅಂಚನ್ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ. ಬೋಳಿಯಾರ್ ನಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಸಮಾಧಾನ್ ಬಾರಿನ ಸಿಸಿಟಿವಿ ಡಿವಿಆರ್ ನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಕೊಣಾಜೆ ಠಾಣೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು ರಾತ್ರಿಯಾದರೂ 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಲು ಆಗ್ರಹಿಸಿದ್ದಾರೆ.
Two attacked stabbed during BJP during Modi taking celebration in Mangalore at Boliyar konaje. Konaje police arrived at the spot and are investigating the case. Some miscreants attacked as they were returning back home after celebrations
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm