ಬ್ರೇಕಿಂಗ್ ನ್ಯೂಸ್
09-06-24 11:09 pm Mangalore Correspondent ಕ್ರೈಂ
ಉಳ್ಳಾಲ, ಜೂ.9: ಮೋದಿ ಪಟ್ಟಾಭಿಷೇಕ ಹಿನ್ನಲೆಯಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ಅನ್ಯಕೋಮಿನ ತಂಡವೊಂದು ಚೂರಿಯಿಂದ ಇರಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ ಹಾಗೂ ನಂದನ್ ಎಂಬವರಿಗೆ ಚೂರಿ ಇರಿಯಲಾಗಿದ್ದು ಗಾಯಾಳುಗಳಿಗೆ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೋದಿ ಪದಗ್ರಹಣದ ಪ್ರಯುಕ್ತ ವಿಜಯೋತ್ಸವ ಬೋಳಿಯಾರ್ ನಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಹರೀಶ್ ಅಂಚನ್, ಹರೀಶ್ ಅವರ ಭಾವ ವಿನೋದ್ ಮತ್ತು ನಂದನ್ ಎಂಬವರು ವಿಜಯೋತ್ಸವ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಳಿಯಾರಿನ ಸಮಾಧಾನ್ ಬಾರ್ ಮುಂಭಾಗದಲ್ಲಿ ಅನ್ಯಕೋಮಿನ ತಂಡವೊಂದು ಅಡ್ಡಗಟ್ಟಿ ಹರೀಶ್ ಮತ್ತು ನಂದನ್ ಮೇಲೆ ಹಲ್ಲೆಗೈದು ಚೂರಿಯಿಂದ ಇರಿದು ಪರಾರಿಯಾಗಿದೆ ಎನ್ನಲಾಗಿದೆ.
ಹರೀಶ್ ಅಂಚನ್ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ. ಬೋಳಿಯಾರ್ ನಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಸಮಾಧಾನ್ ಬಾರಿನ ಸಿಸಿಟಿವಿ ಡಿವಿಆರ್ ನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಕೊಣಾಜೆ ಠಾಣೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು ರಾತ್ರಿಯಾದರೂ 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಲು ಆಗ್ರಹಿಸಿದ್ದಾರೆ.
Two attacked stabbed during BJP during Modi taking celebration in Mangalore at Boliyar konaje. Konaje police arrived at the spot and are investigating the case. Some miscreants attacked as they were returning back home after celebrations
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm