ಬ್ರೇಕಿಂಗ್ ನ್ಯೂಸ್
09-06-24 11:09 pm Mangalore Correspondent ಕ್ರೈಂ
ಉಳ್ಳಾಲ, ಜೂ.9: ಮೋದಿ ಪಟ್ಟಾಭಿಷೇಕ ಹಿನ್ನಲೆಯಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ಅನ್ಯಕೋಮಿನ ತಂಡವೊಂದು ಚೂರಿಯಿಂದ ಇರಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ ಹಾಗೂ ನಂದನ್ ಎಂಬವರಿಗೆ ಚೂರಿ ಇರಿಯಲಾಗಿದ್ದು ಗಾಯಾಳುಗಳಿಗೆ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೋದಿ ಪದಗ್ರಹಣದ ಪ್ರಯುಕ್ತ ವಿಜಯೋತ್ಸವ ಬೋಳಿಯಾರ್ ನಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಹರೀಶ್ ಅಂಚನ್, ಹರೀಶ್ ಅವರ ಭಾವ ವಿನೋದ್ ಮತ್ತು ನಂದನ್ ಎಂಬವರು ವಿಜಯೋತ್ಸವ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಳಿಯಾರಿನ ಸಮಾಧಾನ್ ಬಾರ್ ಮುಂಭಾಗದಲ್ಲಿ ಅನ್ಯಕೋಮಿನ ತಂಡವೊಂದು ಅಡ್ಡಗಟ್ಟಿ ಹರೀಶ್ ಮತ್ತು ನಂದನ್ ಮೇಲೆ ಹಲ್ಲೆಗೈದು ಚೂರಿಯಿಂದ ಇರಿದು ಪರಾರಿಯಾಗಿದೆ ಎನ್ನಲಾಗಿದೆ.
ಹರೀಶ್ ಅಂಚನ್ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ. ಬೋಳಿಯಾರ್ ನಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಸಮಾಧಾನ್ ಬಾರಿನ ಸಿಸಿಟಿವಿ ಡಿವಿಆರ್ ನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಕೊಣಾಜೆ ಠಾಣೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು ರಾತ್ರಿಯಾದರೂ 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಲು ಆಗ್ರಹಿಸಿದ್ದಾರೆ.
Two attacked stabbed during BJP during Modi taking celebration in Mangalore at Boliyar konaje. Konaje police arrived at the spot and are investigating the case. Some miscreants attacked as they were returning back home after celebrations
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm