ಬ್ರೇಕಿಂಗ್ ನ್ಯೂಸ್
09-06-24 11:09 pm Mangalore Correspondent ಕ್ರೈಂ
ಉಳ್ಳಾಲ, ಜೂ.9: ಮೋದಿ ಪಟ್ಟಾಭಿಷೇಕ ಹಿನ್ನಲೆಯಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ಅನ್ಯಕೋಮಿನ ತಂಡವೊಂದು ಚೂರಿಯಿಂದ ಇರಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ ಹಾಗೂ ನಂದನ್ ಎಂಬವರಿಗೆ ಚೂರಿ ಇರಿಯಲಾಗಿದ್ದು ಗಾಯಾಳುಗಳಿಗೆ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



ಮೋದಿ ಪದಗ್ರಹಣದ ಪ್ರಯುಕ್ತ ವಿಜಯೋತ್ಸವ ಬೋಳಿಯಾರ್ ನಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಹರೀಶ್ ಅಂಚನ್, ಹರೀಶ್ ಅವರ ಭಾವ ವಿನೋದ್ ಮತ್ತು ನಂದನ್ ಎಂಬವರು ವಿಜಯೋತ್ಸವ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಳಿಯಾರಿನ ಸಮಾಧಾನ್ ಬಾರ್ ಮುಂಭಾಗದಲ್ಲಿ ಅನ್ಯಕೋಮಿನ ತಂಡವೊಂದು ಅಡ್ಡಗಟ್ಟಿ ಹರೀಶ್ ಮತ್ತು ನಂದನ್ ಮೇಲೆ ಹಲ್ಲೆಗೈದು ಚೂರಿಯಿಂದ ಇರಿದು ಪರಾರಿಯಾಗಿದೆ ಎನ್ನಲಾಗಿದೆ.
ಹರೀಶ್ ಅಂಚನ್ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ. ಬೋಳಿಯಾರ್ ನಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಸಮಾಧಾನ್ ಬಾರಿನ ಸಿಸಿಟಿವಿ ಡಿವಿಆರ್ ನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಕೊಣಾಜೆ ಠಾಣೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು ರಾತ್ರಿಯಾದರೂ 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಲು ಆಗ್ರಹಿಸಿದ್ದಾರೆ.
Two attacked stabbed during BJP during Modi taking celebration in Mangalore at Boliyar konaje. Konaje police arrived at the spot and are investigating the case. Some miscreants attacked as they were returning back home after celebrations
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm