ಬ್ರೇಕಿಂಗ್ ನ್ಯೂಸ್
11-06-24 10:51 am Mangalore Correspondent ಕ್ರೈಂ
ಮಂಗಳೂರು, ಜೂನ್ 11: ಬ್ಯಾಂಕ್ ಮ್ಯಾನೇಜರೊಬ್ಬರು ಖಾಸಗಿ ವ್ಯಕ್ತಿಯ ಜೊತೆ ಸೇರಿ 65 ಲಕ್ಷ ರೂ. ಹೂಡಿಕೆ ಮಾಡಿಸಿ ವ್ಯಕ್ತಿಯೊಬ್ಬರಿಗೆ ಮೋಸ ಮಾಡಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೈಕಂಪಾಡಿ ಕುಕ್ಕಾಡಿ ಕಾಂಪ್ಲೆಕ್ಸ್ ನಲ್ಲಿ ಮಳಿಗೆ ಹೊಂದಿದ್ದ ಶರೀಫ್ ಮತ್ತು ಸುರತ್ಕಲ್ ಖಾಸಗಿ ಬ್ಯಾಂಕ್ ಶಾಖೆಯ ಮ್ಯಾನೇಜರ್ ರಾಘವೇಂದ್ರ ಶೇಟ್ ಪ್ರಕರಣದ ಆರೋಪಿಗಳು. ಪ್ರದೀಪ್ ಕುಮಾರ್ ಎಂಬವರು ತನ್ನ ಪತ್ನಿಯ ಜೊತೆಗೆ ಸುರತ್ಕಲ್ ಖಾಸಗಿ ಬ್ಯಾಂಕಿನಲ್ಲಿ ಖಾತೆ ತೆರೆದಿದ್ದರು. ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ರಾಘವೇಂದ್ರ ಶೇಟ್ ಪರಿಚಿತನಾಗಿದ್ದು, ಇಲ್ಲಿ ಹಣವನ್ನು ಠೇವಣಿ ಇಡುವುದಕ್ಕಿಂತ ವ್ಯವಹಾರದಲ್ಲಿ ಹೂಡಿಕೆ ಮಾಡುವುದು ಬೆಟರ್ ಎಂದು ಸಲಹೆ ನೀಡಿದ್ದಾರೆ. ಅಲ್ಲದೆ, ತನ್ನ ಪರಿಚಯದ ಶರೀಫ್ ಅವರ ಕೋಕ್ ಸರಬರಾಜು ವ್ಯವಹಾರದಲ್ಲಿ ಪಾಲುದಾರನಾಗುವಂತೆ ತಿಳಿಸಿದ್ದಾರೆ. ಶರೀಫ್ ಬ್ಯಾಂಕ್ ಲೋನ್ ಪಡೆಯಲು ಮುಂದಾಗಿದ್ದು, ಅದಕ್ಕೆ ವಿಳಂಬ ಆಗಬಹುದು. ನೀವು ಹೂಡಿಕೆ ಮಾಡಿದರೆ ಲಾಭ ಬರಬಹುದು ಎಂದು ಹೇಳಿದ್ದರು.
ಅದರಂತೆ, ಪ್ರದೀಪ್ ಕುಮಾರ್ ಅವರು ಶರೀಫ್ ಜೊತೆಗೆ ಪಾಲುದಾರನಾಗಲು ಸಮ್ಮತಿಸಿದ್ದು, ವ್ಯವಹಾರದಲ್ಲಿ 50 ಲಕ್ಷ ರೂ. ಹೂಡಿಕೆ ಮಾಡಿದ್ದರು. ಹಣದ ಭದ್ರತೆಗಾಗಿ ಅಬ್ದುಲ್ ಬಶೀರ್ ಎಂಬವರ ಜಾಗವನ್ನು ಸಾಲದ ವ್ಯವಹಾರಕ್ಕಾಗಿ ಕರಾರು ಮಾಡಿಕೊಂಡಿದ್ದರು. ಆನಂತರ, ಅಕ್ಟೋಬರ್ 17ರಂದು ಮತ್ತೆ 15 ಲಕ್ಷ ರೂ. ಹಣವನ್ನು ಬೇರೊಂದು ಬ್ಯಾಂಕ್ ಖಾತೆಯಿಂದ ಪ್ರದೀಪ್ ಕುಮಾರ್, ಶರೀಫ್ ಖಾತೆಗೆ ವರ್ಗಾಯಿಸಿದ್ದರು. ಇದಕ್ಕಾಗಿ ಖಾಲಿ ಚೆಕ್ ಪತ್ರವನ್ನೂ ಪಡೆದಿದ್ದರು. ಆದರೆ, ಕರಾರು ಪ್ರಕಾರ ಶರೀಫ್ ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾನೆ.
ಚೆಕ್ಕನ್ನು ಬ್ಯಾಂಕಿಗೆ ಹಾಕಿದಾಗ, ಅದು ಬೌನ್ಸ್ ಆಗಿದ್ದು, 65 ಲಕ್ಷ ಹೂಡಿಕೆ ಮಾಡಿದ್ದ ಪ್ರದೀಪ್ ಕುಮಾರ್ ಮೋಸ ಹೋಗಿದ್ದಾರೆ. ಇದಲ್ಲದೆ, ಹಣ ಹೂಡಿಕೆ ಮಾಡಿಸಿದ್ದಕ್ಕಾಗಿ ಬ್ಯಾಂಕ್ ಮ್ಯಾನೇಜರ್, ಶರೀಫ್ ಬಳಿಯಿಂದ ಕಮಿಷನ್ ಹಣವನ್ನೂ ಪಡೆದಿರುವುದು ತಿಳಿಯುತ್ತಲೇ ಪ್ರದೀಪ್ ಕುಮಾರ್ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.
Fraud by bank manager of 65 lakhs in the name of investment in supplies in Mangalore. A case has been registered against Raghavendra at cen police station.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am