ಬ್ರೇಕಿಂಗ್ ನ್ಯೂಸ್
11-06-24 10:51 am Mangalore Correspondent ಕ್ರೈಂ
ಮಂಗಳೂರು, ಜೂನ್ 11: ಬ್ಯಾಂಕ್ ಮ್ಯಾನೇಜರೊಬ್ಬರು ಖಾಸಗಿ ವ್ಯಕ್ತಿಯ ಜೊತೆ ಸೇರಿ 65 ಲಕ್ಷ ರೂ. ಹೂಡಿಕೆ ಮಾಡಿಸಿ ವ್ಯಕ್ತಿಯೊಬ್ಬರಿಗೆ ಮೋಸ ಮಾಡಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೈಕಂಪಾಡಿ ಕುಕ್ಕಾಡಿ ಕಾಂಪ್ಲೆಕ್ಸ್ ನಲ್ಲಿ ಮಳಿಗೆ ಹೊಂದಿದ್ದ ಶರೀಫ್ ಮತ್ತು ಸುರತ್ಕಲ್ ಖಾಸಗಿ ಬ್ಯಾಂಕ್ ಶಾಖೆಯ ಮ್ಯಾನೇಜರ್ ರಾಘವೇಂದ್ರ ಶೇಟ್ ಪ್ರಕರಣದ ಆರೋಪಿಗಳು. ಪ್ರದೀಪ್ ಕುಮಾರ್ ಎಂಬವರು ತನ್ನ ಪತ್ನಿಯ ಜೊತೆಗೆ ಸುರತ್ಕಲ್ ಖಾಸಗಿ ಬ್ಯಾಂಕಿನಲ್ಲಿ ಖಾತೆ ತೆರೆದಿದ್ದರು. ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ರಾಘವೇಂದ್ರ ಶೇಟ್ ಪರಿಚಿತನಾಗಿದ್ದು, ಇಲ್ಲಿ ಹಣವನ್ನು ಠೇವಣಿ ಇಡುವುದಕ್ಕಿಂತ ವ್ಯವಹಾರದಲ್ಲಿ ಹೂಡಿಕೆ ಮಾಡುವುದು ಬೆಟರ್ ಎಂದು ಸಲಹೆ ನೀಡಿದ್ದಾರೆ. ಅಲ್ಲದೆ, ತನ್ನ ಪರಿಚಯದ ಶರೀಫ್ ಅವರ ಕೋಕ್ ಸರಬರಾಜು ವ್ಯವಹಾರದಲ್ಲಿ ಪಾಲುದಾರನಾಗುವಂತೆ ತಿಳಿಸಿದ್ದಾರೆ. ಶರೀಫ್ ಬ್ಯಾಂಕ್ ಲೋನ್ ಪಡೆಯಲು ಮುಂದಾಗಿದ್ದು, ಅದಕ್ಕೆ ವಿಳಂಬ ಆಗಬಹುದು. ನೀವು ಹೂಡಿಕೆ ಮಾಡಿದರೆ ಲಾಭ ಬರಬಹುದು ಎಂದು ಹೇಳಿದ್ದರು.
ಅದರಂತೆ, ಪ್ರದೀಪ್ ಕುಮಾರ್ ಅವರು ಶರೀಫ್ ಜೊತೆಗೆ ಪಾಲುದಾರನಾಗಲು ಸಮ್ಮತಿಸಿದ್ದು, ವ್ಯವಹಾರದಲ್ಲಿ 50 ಲಕ್ಷ ರೂ. ಹೂಡಿಕೆ ಮಾಡಿದ್ದರು. ಹಣದ ಭದ್ರತೆಗಾಗಿ ಅಬ್ದುಲ್ ಬಶೀರ್ ಎಂಬವರ ಜಾಗವನ್ನು ಸಾಲದ ವ್ಯವಹಾರಕ್ಕಾಗಿ ಕರಾರು ಮಾಡಿಕೊಂಡಿದ್ದರು. ಆನಂತರ, ಅಕ್ಟೋಬರ್ 17ರಂದು ಮತ್ತೆ 15 ಲಕ್ಷ ರೂ. ಹಣವನ್ನು ಬೇರೊಂದು ಬ್ಯಾಂಕ್ ಖಾತೆಯಿಂದ ಪ್ರದೀಪ್ ಕುಮಾರ್, ಶರೀಫ್ ಖಾತೆಗೆ ವರ್ಗಾಯಿಸಿದ್ದರು. ಇದಕ್ಕಾಗಿ ಖಾಲಿ ಚೆಕ್ ಪತ್ರವನ್ನೂ ಪಡೆದಿದ್ದರು. ಆದರೆ, ಕರಾರು ಪ್ರಕಾರ ಶರೀಫ್ ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾನೆ.
ಚೆಕ್ಕನ್ನು ಬ್ಯಾಂಕಿಗೆ ಹಾಕಿದಾಗ, ಅದು ಬೌನ್ಸ್ ಆಗಿದ್ದು, 65 ಲಕ್ಷ ಹೂಡಿಕೆ ಮಾಡಿದ್ದ ಪ್ರದೀಪ್ ಕುಮಾರ್ ಮೋಸ ಹೋಗಿದ್ದಾರೆ. ಇದಲ್ಲದೆ, ಹಣ ಹೂಡಿಕೆ ಮಾಡಿಸಿದ್ದಕ್ಕಾಗಿ ಬ್ಯಾಂಕ್ ಮ್ಯಾನೇಜರ್, ಶರೀಫ್ ಬಳಿಯಿಂದ ಕಮಿಷನ್ ಹಣವನ್ನೂ ಪಡೆದಿರುವುದು ತಿಳಿಯುತ್ತಲೇ ಪ್ರದೀಪ್ ಕುಮಾರ್ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.
Fraud by bank manager of 65 lakhs in the name of investment in supplies in Mangalore. A case has been registered against Raghavendra at cen police station.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm