ಬ್ರೇಕಿಂಗ್ ನ್ಯೂಸ್
11-06-24 10:51 am Mangalore Correspondent ಕ್ರೈಂ
ಮಂಗಳೂರು, ಜೂನ್ 11: ಬ್ಯಾಂಕ್ ಮ್ಯಾನೇಜರೊಬ್ಬರು ಖಾಸಗಿ ವ್ಯಕ್ತಿಯ ಜೊತೆ ಸೇರಿ 65 ಲಕ್ಷ ರೂ. ಹೂಡಿಕೆ ಮಾಡಿಸಿ ವ್ಯಕ್ತಿಯೊಬ್ಬರಿಗೆ ಮೋಸ ಮಾಡಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೈಕಂಪಾಡಿ ಕುಕ್ಕಾಡಿ ಕಾಂಪ್ಲೆಕ್ಸ್ ನಲ್ಲಿ ಮಳಿಗೆ ಹೊಂದಿದ್ದ ಶರೀಫ್ ಮತ್ತು ಸುರತ್ಕಲ್ ಖಾಸಗಿ ಬ್ಯಾಂಕ್ ಶಾಖೆಯ ಮ್ಯಾನೇಜರ್ ರಾಘವೇಂದ್ರ ಶೇಟ್ ಪ್ರಕರಣದ ಆರೋಪಿಗಳು. ಪ್ರದೀಪ್ ಕುಮಾರ್ ಎಂಬವರು ತನ್ನ ಪತ್ನಿಯ ಜೊತೆಗೆ ಸುರತ್ಕಲ್ ಖಾಸಗಿ ಬ್ಯಾಂಕಿನಲ್ಲಿ ಖಾತೆ ತೆರೆದಿದ್ದರು. ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ರಾಘವೇಂದ್ರ ಶೇಟ್ ಪರಿಚಿತನಾಗಿದ್ದು, ಇಲ್ಲಿ ಹಣವನ್ನು ಠೇವಣಿ ಇಡುವುದಕ್ಕಿಂತ ವ್ಯವಹಾರದಲ್ಲಿ ಹೂಡಿಕೆ ಮಾಡುವುದು ಬೆಟರ್ ಎಂದು ಸಲಹೆ ನೀಡಿದ್ದಾರೆ. ಅಲ್ಲದೆ, ತನ್ನ ಪರಿಚಯದ ಶರೀಫ್ ಅವರ ಕೋಕ್ ಸರಬರಾಜು ವ್ಯವಹಾರದಲ್ಲಿ ಪಾಲುದಾರನಾಗುವಂತೆ ತಿಳಿಸಿದ್ದಾರೆ. ಶರೀಫ್ ಬ್ಯಾಂಕ್ ಲೋನ್ ಪಡೆಯಲು ಮುಂದಾಗಿದ್ದು, ಅದಕ್ಕೆ ವಿಳಂಬ ಆಗಬಹುದು. ನೀವು ಹೂಡಿಕೆ ಮಾಡಿದರೆ ಲಾಭ ಬರಬಹುದು ಎಂದು ಹೇಳಿದ್ದರು.
ಅದರಂತೆ, ಪ್ರದೀಪ್ ಕುಮಾರ್ ಅವರು ಶರೀಫ್ ಜೊತೆಗೆ ಪಾಲುದಾರನಾಗಲು ಸಮ್ಮತಿಸಿದ್ದು, ವ್ಯವಹಾರದಲ್ಲಿ 50 ಲಕ್ಷ ರೂ. ಹೂಡಿಕೆ ಮಾಡಿದ್ದರು. ಹಣದ ಭದ್ರತೆಗಾಗಿ ಅಬ್ದುಲ್ ಬಶೀರ್ ಎಂಬವರ ಜಾಗವನ್ನು ಸಾಲದ ವ್ಯವಹಾರಕ್ಕಾಗಿ ಕರಾರು ಮಾಡಿಕೊಂಡಿದ್ದರು. ಆನಂತರ, ಅಕ್ಟೋಬರ್ 17ರಂದು ಮತ್ತೆ 15 ಲಕ್ಷ ರೂ. ಹಣವನ್ನು ಬೇರೊಂದು ಬ್ಯಾಂಕ್ ಖಾತೆಯಿಂದ ಪ್ರದೀಪ್ ಕುಮಾರ್, ಶರೀಫ್ ಖಾತೆಗೆ ವರ್ಗಾಯಿಸಿದ್ದರು. ಇದಕ್ಕಾಗಿ ಖಾಲಿ ಚೆಕ್ ಪತ್ರವನ್ನೂ ಪಡೆದಿದ್ದರು. ಆದರೆ, ಕರಾರು ಪ್ರಕಾರ ಶರೀಫ್ ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾನೆ.
ಚೆಕ್ಕನ್ನು ಬ್ಯಾಂಕಿಗೆ ಹಾಕಿದಾಗ, ಅದು ಬೌನ್ಸ್ ಆಗಿದ್ದು, 65 ಲಕ್ಷ ಹೂಡಿಕೆ ಮಾಡಿದ್ದ ಪ್ರದೀಪ್ ಕುಮಾರ್ ಮೋಸ ಹೋಗಿದ್ದಾರೆ. ಇದಲ್ಲದೆ, ಹಣ ಹೂಡಿಕೆ ಮಾಡಿಸಿದ್ದಕ್ಕಾಗಿ ಬ್ಯಾಂಕ್ ಮ್ಯಾನೇಜರ್, ಶರೀಫ್ ಬಳಿಯಿಂದ ಕಮಿಷನ್ ಹಣವನ್ನೂ ಪಡೆದಿರುವುದು ತಿಳಿಯುತ್ತಲೇ ಪ್ರದೀಪ್ ಕುಮಾರ್ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.
Fraud by bank manager of 65 lakhs in the name of investment in supplies in Mangalore. A case has been registered against Raghavendra at cen police station.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm