ಬ್ರೇಕಿಂಗ್ ನ್ಯೂಸ್
11-06-24 10:51 am Mangalore Correspondent ಕ್ರೈಂ
ಮಂಗಳೂರು, ಜೂನ್ 11: ಬ್ಯಾಂಕ್ ಮ್ಯಾನೇಜರೊಬ್ಬರು ಖಾಸಗಿ ವ್ಯಕ್ತಿಯ ಜೊತೆ ಸೇರಿ 65 ಲಕ್ಷ ರೂ. ಹೂಡಿಕೆ ಮಾಡಿಸಿ ವ್ಯಕ್ತಿಯೊಬ್ಬರಿಗೆ ಮೋಸ ಮಾಡಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೈಕಂಪಾಡಿ ಕುಕ್ಕಾಡಿ ಕಾಂಪ್ಲೆಕ್ಸ್ ನಲ್ಲಿ ಮಳಿಗೆ ಹೊಂದಿದ್ದ ಶರೀಫ್ ಮತ್ತು ಸುರತ್ಕಲ್ ಖಾಸಗಿ ಬ್ಯಾಂಕ್ ಶಾಖೆಯ ಮ್ಯಾನೇಜರ್ ರಾಘವೇಂದ್ರ ಶೇಟ್ ಪ್ರಕರಣದ ಆರೋಪಿಗಳು. ಪ್ರದೀಪ್ ಕುಮಾರ್ ಎಂಬವರು ತನ್ನ ಪತ್ನಿಯ ಜೊತೆಗೆ ಸುರತ್ಕಲ್ ಖಾಸಗಿ ಬ್ಯಾಂಕಿನಲ್ಲಿ ಖಾತೆ ತೆರೆದಿದ್ದರು. ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ರಾಘವೇಂದ್ರ ಶೇಟ್ ಪರಿಚಿತನಾಗಿದ್ದು, ಇಲ್ಲಿ ಹಣವನ್ನು ಠೇವಣಿ ಇಡುವುದಕ್ಕಿಂತ ವ್ಯವಹಾರದಲ್ಲಿ ಹೂಡಿಕೆ ಮಾಡುವುದು ಬೆಟರ್ ಎಂದು ಸಲಹೆ ನೀಡಿದ್ದಾರೆ. ಅಲ್ಲದೆ, ತನ್ನ ಪರಿಚಯದ ಶರೀಫ್ ಅವರ ಕೋಕ್ ಸರಬರಾಜು ವ್ಯವಹಾರದಲ್ಲಿ ಪಾಲುದಾರನಾಗುವಂತೆ ತಿಳಿಸಿದ್ದಾರೆ. ಶರೀಫ್ ಬ್ಯಾಂಕ್ ಲೋನ್ ಪಡೆಯಲು ಮುಂದಾಗಿದ್ದು, ಅದಕ್ಕೆ ವಿಳಂಬ ಆಗಬಹುದು. ನೀವು ಹೂಡಿಕೆ ಮಾಡಿದರೆ ಲಾಭ ಬರಬಹುದು ಎಂದು ಹೇಳಿದ್ದರು.
ಅದರಂತೆ, ಪ್ರದೀಪ್ ಕುಮಾರ್ ಅವರು ಶರೀಫ್ ಜೊತೆಗೆ ಪಾಲುದಾರನಾಗಲು ಸಮ್ಮತಿಸಿದ್ದು, ವ್ಯವಹಾರದಲ್ಲಿ 50 ಲಕ್ಷ ರೂ. ಹೂಡಿಕೆ ಮಾಡಿದ್ದರು. ಹಣದ ಭದ್ರತೆಗಾಗಿ ಅಬ್ದುಲ್ ಬಶೀರ್ ಎಂಬವರ ಜಾಗವನ್ನು ಸಾಲದ ವ್ಯವಹಾರಕ್ಕಾಗಿ ಕರಾರು ಮಾಡಿಕೊಂಡಿದ್ದರು. ಆನಂತರ, ಅಕ್ಟೋಬರ್ 17ರಂದು ಮತ್ತೆ 15 ಲಕ್ಷ ರೂ. ಹಣವನ್ನು ಬೇರೊಂದು ಬ್ಯಾಂಕ್ ಖಾತೆಯಿಂದ ಪ್ರದೀಪ್ ಕುಮಾರ್, ಶರೀಫ್ ಖಾತೆಗೆ ವರ್ಗಾಯಿಸಿದ್ದರು. ಇದಕ್ಕಾಗಿ ಖಾಲಿ ಚೆಕ್ ಪತ್ರವನ್ನೂ ಪಡೆದಿದ್ದರು. ಆದರೆ, ಕರಾರು ಪ್ರಕಾರ ಶರೀಫ್ ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾನೆ.
ಚೆಕ್ಕನ್ನು ಬ್ಯಾಂಕಿಗೆ ಹಾಕಿದಾಗ, ಅದು ಬೌನ್ಸ್ ಆಗಿದ್ದು, 65 ಲಕ್ಷ ಹೂಡಿಕೆ ಮಾಡಿದ್ದ ಪ್ರದೀಪ್ ಕುಮಾರ್ ಮೋಸ ಹೋಗಿದ್ದಾರೆ. ಇದಲ್ಲದೆ, ಹಣ ಹೂಡಿಕೆ ಮಾಡಿಸಿದ್ದಕ್ಕಾಗಿ ಬ್ಯಾಂಕ್ ಮ್ಯಾನೇಜರ್, ಶರೀಫ್ ಬಳಿಯಿಂದ ಕಮಿಷನ್ ಹಣವನ್ನೂ ಪಡೆದಿರುವುದು ತಿಳಿಯುತ್ತಲೇ ಪ್ರದೀಪ್ ಕುಮಾರ್ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.
Fraud by bank manager of 65 lakhs in the name of investment in supplies in Mangalore. A case has been registered against Raghavendra at cen police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm