ಬ್ರೇಕಿಂಗ್ ನ್ಯೂಸ್
07-08-20 12:45 pm Headline Karnataka News Network ಕ್ರೈಂ
ಬಂಟ್ವಾಳ, ಆಗಸ್ಟ್ 07: ಬೈಕ್ ಅಪಘಾತವನ್ನು ಮುಂದಿಟ್ಟು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಗೆ ಪ್ರತೀಕಾರಕ್ಕೆ ಯತ್ನಿಸಲಾಗಿದೆ ಎಂದು ಸ್ಥಾಪಿತ ಹಿತಾಸಕ್ತಿಗಳು ಬಿಂಬಿಸಲು ಹೊರಟ ವಿಚಾರ ಬೆಳಕಿಗೆ ಬಂದಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ತನ್ನ ಬೈಕ್ ನಲ್ಲಿ ಮಸೀದಿಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬೈಕ್ ಒಂದಕ್ಕೆ ಅಪಘಾತ ವಾಗಿತ್ತು. ಈ ವೇಳೆ, ಶರೀಫ್ ಮತ್ತು ಬೈಕ್ ನವರಿಗೆ ಗಲಾಟೆ ನಡೆದು ನವೀನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದೂ ಆಗಿತ್ತು. ಇದೇ ಘಟನೆ ಹಿನ್ನೆಲೆಯಲಿ ನವೀನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಈಗ ಅದೇ ಚಿಕ್ಕ ಅಪಘಾತ ಘಟನೆಯನ್ನು ಕೆಲವು ಸ್ವಹಿತಾಸಕ್ತಿ ಆಧರಿತ ಸಂಘಟನೆಗಳು ಕೊಲೆ ಯತ್ನ ಎಂಬುದಾಗಿ ಬಿಂಬಿಸುತ್ತಿವೆ. ಅಲ್ಲದೆ, ಆರೋಪಿ ಶರೀಫ್ ನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ, ಆರೋಪಿ ಮೂಲಕ ಅದೇ ರೀತಿಯ ಹೇಳಿಕೆ ಕೊಡುವಂತೆ ಮಾಡಿದ್ದಾರೆ.
ಸಜಿಪ ಮುಡ್ನೂರು ಬಳಿಯ ಆಲಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಅದು ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಅಲ್ಲದೆ, ಯಾವಾಗಲೂ ಜನ ಓಡಾಡುವ ರಸ್ತೆಯಲ್ಲಿಯೇ ಈ ಅಪಘಾತ ನಡೆದಿತ್ತು. ಆದರೆ ಇದೇ ಬೈಕ್ ಅಪಘಾತವನ್ನೇ ಮುಂದಿಟ್ಟು ಕೆಲವರು ಉದ್ದೇಶಪೂರ್ವಕ ಕೋಮುಭಾವನೆ ಕೆರಳಿಸಲು ಯತ್ನಿಸುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ಇಷ್ಟಕ್ಕೂ ಶರೀಫ್ ಕಾಲಿಗೆ ತರಚಿದ ಗಾಯ ಮಾತ್ರ ಆಗಿರುವುದು ಆತನ ಹೇಳಿಕೆ ಪೊಲೀಸರಿಗೂ ಸಂಶಯ ಹುಟ್ಟಿಸಿದೆ. ಮುಸ್ಲಿಂ ಬಾಹುಳ್ಯ ಇರುವ ಪ್ರದೇಶದಲ್ಲಿ ಶರೀಫ್ ಮೇಲೆ ಕೊಲೆಗೆ ಯತ್ನ ನಡೆದಿರಬಹುದಾ ಎನ್ನುವ ಪ್ರಶ್ನೆಯೂ ಮೂಡುತ್ತಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರು ಕೂಡ ಎಚ್ಚತ್ತುಕೊಂಡಿದ್ದು ಸ್ಥಾಪಿತ ಹಿತಾಸಕ್ತಿಯ ಸುದ್ದಿಯ ಬೆನ್ನತ್ತಿದ್ದಾರೆ.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm