ಬ್ರೇಕಿಂಗ್ ನ್ಯೂಸ್
07-08-20 12:45 pm Headline Karnataka News Network ಕ್ರೈಂ
ಬಂಟ್ವಾಳ, ಆಗಸ್ಟ್ 07: ಬೈಕ್ ಅಪಘಾತವನ್ನು ಮುಂದಿಟ್ಟು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಗೆ ಪ್ರತೀಕಾರಕ್ಕೆ ಯತ್ನಿಸಲಾಗಿದೆ ಎಂದು ಸ್ಥಾಪಿತ ಹಿತಾಸಕ್ತಿಗಳು ಬಿಂಬಿಸಲು ಹೊರಟ ವಿಚಾರ ಬೆಳಕಿಗೆ ಬಂದಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ತನ್ನ ಬೈಕ್ ನಲ್ಲಿ ಮಸೀದಿಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬೈಕ್ ಒಂದಕ್ಕೆ ಅಪಘಾತ ವಾಗಿತ್ತು. ಈ ವೇಳೆ, ಶರೀಫ್ ಮತ್ತು ಬೈಕ್ ನವರಿಗೆ ಗಲಾಟೆ ನಡೆದು ನವೀನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದೂ ಆಗಿತ್ತು. ಇದೇ ಘಟನೆ ಹಿನ್ನೆಲೆಯಲಿ ನವೀನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಈಗ ಅದೇ ಚಿಕ್ಕ ಅಪಘಾತ ಘಟನೆಯನ್ನು ಕೆಲವು ಸ್ವಹಿತಾಸಕ್ತಿ ಆಧರಿತ ಸಂಘಟನೆಗಳು ಕೊಲೆ ಯತ್ನ ಎಂಬುದಾಗಿ ಬಿಂಬಿಸುತ್ತಿವೆ. ಅಲ್ಲದೆ, ಆರೋಪಿ ಶರೀಫ್ ನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ, ಆರೋಪಿ ಮೂಲಕ ಅದೇ ರೀತಿಯ ಹೇಳಿಕೆ ಕೊಡುವಂತೆ ಮಾಡಿದ್ದಾರೆ.

ಸಜಿಪ ಮುಡ್ನೂರು ಬಳಿಯ ಆಲಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಅದು ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಅಲ್ಲದೆ, ಯಾವಾಗಲೂ ಜನ ಓಡಾಡುವ ರಸ್ತೆಯಲ್ಲಿಯೇ ಈ ಅಪಘಾತ ನಡೆದಿತ್ತು. ಆದರೆ ಇದೇ ಬೈಕ್ ಅಪಘಾತವನ್ನೇ ಮುಂದಿಟ್ಟು ಕೆಲವರು ಉದ್ದೇಶಪೂರ್ವಕ ಕೋಮುಭಾವನೆ ಕೆರಳಿಸಲು ಯತ್ನಿಸುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ಇಷ್ಟಕ್ಕೂ ಶರೀಫ್ ಕಾಲಿಗೆ ತರಚಿದ ಗಾಯ ಮಾತ್ರ ಆಗಿರುವುದು ಆತನ ಹೇಳಿಕೆ ಪೊಲೀಸರಿಗೂ ಸಂಶಯ ಹುಟ್ಟಿಸಿದೆ. ಮುಸ್ಲಿಂ ಬಾಹುಳ್ಯ ಇರುವ ಪ್ರದೇಶದಲ್ಲಿ ಶರೀಫ್ ಮೇಲೆ ಕೊಲೆಗೆ ಯತ್ನ ನಡೆದಿರಬಹುದಾ ಎನ್ನುವ ಪ್ರಶ್ನೆಯೂ ಮೂಡುತ್ತಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರು ಕೂಡ ಎಚ್ಚತ್ತುಕೊಂಡಿದ್ದು ಸ್ಥಾಪಿತ ಹಿತಾಸಕ್ತಿಯ ಸುದ್ದಿಯ ಬೆನ್ನತ್ತಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am