ಬ್ರೇಕಿಂಗ್ ನ್ಯೂಸ್
07-08-20 12:45 pm Headline Karnataka News Network ಕ್ರೈಂ
ಬಂಟ್ವಾಳ, ಆಗಸ್ಟ್ 07: ಬೈಕ್ ಅಪಘಾತವನ್ನು ಮುಂದಿಟ್ಟು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಗೆ ಪ್ರತೀಕಾರಕ್ಕೆ ಯತ್ನಿಸಲಾಗಿದೆ ಎಂದು ಸ್ಥಾಪಿತ ಹಿತಾಸಕ್ತಿಗಳು ಬಿಂಬಿಸಲು ಹೊರಟ ವಿಚಾರ ಬೆಳಕಿಗೆ ಬಂದಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ತನ್ನ ಬೈಕ್ ನಲ್ಲಿ ಮಸೀದಿಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬೈಕ್ ಒಂದಕ್ಕೆ ಅಪಘಾತ ವಾಗಿತ್ತು. ಈ ವೇಳೆ, ಶರೀಫ್ ಮತ್ತು ಬೈಕ್ ನವರಿಗೆ ಗಲಾಟೆ ನಡೆದು ನವೀನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದೂ ಆಗಿತ್ತು. ಇದೇ ಘಟನೆ ಹಿನ್ನೆಲೆಯಲಿ ನವೀನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಈಗ ಅದೇ ಚಿಕ್ಕ ಅಪಘಾತ ಘಟನೆಯನ್ನು ಕೆಲವು ಸ್ವಹಿತಾಸಕ್ತಿ ಆಧರಿತ ಸಂಘಟನೆಗಳು ಕೊಲೆ ಯತ್ನ ಎಂಬುದಾಗಿ ಬಿಂಬಿಸುತ್ತಿವೆ. ಅಲ್ಲದೆ, ಆರೋಪಿ ಶರೀಫ್ ನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ, ಆರೋಪಿ ಮೂಲಕ ಅದೇ ರೀತಿಯ ಹೇಳಿಕೆ ಕೊಡುವಂತೆ ಮಾಡಿದ್ದಾರೆ.

ಸಜಿಪ ಮುಡ್ನೂರು ಬಳಿಯ ಆಲಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಅದು ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಅಲ್ಲದೆ, ಯಾವಾಗಲೂ ಜನ ಓಡಾಡುವ ರಸ್ತೆಯಲ್ಲಿಯೇ ಈ ಅಪಘಾತ ನಡೆದಿತ್ತು. ಆದರೆ ಇದೇ ಬೈಕ್ ಅಪಘಾತವನ್ನೇ ಮುಂದಿಟ್ಟು ಕೆಲವರು ಉದ್ದೇಶಪೂರ್ವಕ ಕೋಮುಭಾವನೆ ಕೆರಳಿಸಲು ಯತ್ನಿಸುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ಇಷ್ಟಕ್ಕೂ ಶರೀಫ್ ಕಾಲಿಗೆ ತರಚಿದ ಗಾಯ ಮಾತ್ರ ಆಗಿರುವುದು ಆತನ ಹೇಳಿಕೆ ಪೊಲೀಸರಿಗೂ ಸಂಶಯ ಹುಟ್ಟಿಸಿದೆ. ಮುಸ್ಲಿಂ ಬಾಹುಳ್ಯ ಇರುವ ಪ್ರದೇಶದಲ್ಲಿ ಶರೀಫ್ ಮೇಲೆ ಕೊಲೆಗೆ ಯತ್ನ ನಡೆದಿರಬಹುದಾ ಎನ್ನುವ ಪ್ರಶ್ನೆಯೂ ಮೂಡುತ್ತಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರು ಕೂಡ ಎಚ್ಚತ್ತುಕೊಂಡಿದ್ದು ಸ್ಥಾಪಿತ ಹಿತಾಸಕ್ತಿಯ ಸುದ್ದಿಯ ಬೆನ್ನತ್ತಿದ್ದಾರೆ.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm