ಬ್ರೇಕಿಂಗ್ ನ್ಯೂಸ್
05-12-20 11:55 am Headline Karnataka News Network ಕ್ರೈಂ
ಚಿಕ್ಕಮಗಳೂರು, ಡಿ.5a: ಆಂಟಿ ಪ್ರೀತ್ಸೇ ಎಂದು ಹಿಂದೆ ಬಿದ್ದಿದ್ದ ಯುವಕನ ಪ್ರೀತಿಯನ್ನು ನಿರಾಕರಿಸಿದ ವಿವಾಹಿತ ಮಹಿಳೆಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಬಿಳಗುಳ ಗ್ರಾಮದ ವಿಶ್ವನಾಥ ಶೆಟ್ಟಿ ಎಂಬುವರ ಪುತ್ರಿ ಸವಿತಾ (40) ಪಾಗಲ್ ಪ್ರೇಮಿಯ ಪೈಶಾಚಿಕ ಕೃತ್ಯಕ್ಕೆ ಬಲಿಯಾದ ನತದೃಷ್ಟ ಮಹಿಳೆ.
ಸವಿತಾಳ ಮೇಲೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ ನಂದೀಶ್ಗೌಡನಿಗೆ ಸುಟ್ಟ ಗಾಯಗಳಾಗಿದ್ದು , ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿವಾಹಿತಳಾಗಿದ್ದ ಸವಿತಾ ಪತಿಯನ್ನು ತೊರೆದು ಬಿಳಗುಳದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಾ ಸಮೀಪದ ಕೊಲ್ಲಿ ಬೆಲ್ ಹೋಂ ಸ್ಟೇಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಳು.
ಪಕ್ಕದ ಎಸ್ಟೇಟ್ವೊಂದರಲ್ಲಿ ಚಾಲಕನಾಗಿದ್ದ 28 ವರ್ಷದ ನಂದೀಶ್ಗೌಡ 40 ವರ್ಷದ ಸವಿತಾಳನ್ನು ಪ್ರೀತಿಸುವಂತೆ ಪದೇ ಪದೇ ಒತ್ತಾಯಿಸುತ್ತಿದ್ದ ಎನ್ನಲಾಗಿದೆ.
ತನಗಿಂತ 12 ವರ್ಷ ಕಿರಿಯವನಾದ ನಂದೀಶ್ಗೌಡನನ್ನು ಪ್ರೀತಿಸಲು ಸವಿತಾ ನಿರಾಕರಿಸಿದ್ದಳು. ಸವಿತಾಳ ಈ ಧೋರಣೆಯಿಂದ ಕೋಪಗೊಂಡ ಪಾಗಲ್ ಪ್ರೇಮಿ ಕಳೆದ ಭಾನುವಾರ ಹೋಂ ಸ್ಟೇಯಲ್ಲಿ ಅಡುಗೆ ಕೆಲಸ ಮಾಡಿಕೊಂಡು ಮನೆಗೆ ಹಿಂದಿರುಗುತ್ತಿದ್ದ ಸವಿತಾಳ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ.
ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ಸವಿತಾ ಮತ್ತು ನಂದೀಶ್ಗೌಡನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸವಿತಾ ಮೃತಪಟ್ಟಿದ್ದಾಳೆ.
ನಂದೀಶ್ಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಆತನ ಪ್ರೀತಿ ನಿರಾಕರಿಸಿದ್ದಕ್ಕೆ ಈ ಕೃತ್ಯವೆಸಗಿದ್ದಾನೆ ಎಂದು ಸವಿತಾಳ ಸಹೋದರ ನಾಗೇಶ್ ರೈ ಪೋಲಿಸರಿಗೆ ದೂರು ನೀಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm