ಬ್ರೇಕಿಂಗ್ ನ್ಯೂಸ್
05-12-20 11:55 am Headline Karnataka News Network ಕ್ರೈಂ
ಚಿಕ್ಕಮಗಳೂರು, ಡಿ.5a: ಆಂಟಿ ಪ್ರೀತ್ಸೇ ಎಂದು ಹಿಂದೆ ಬಿದ್ದಿದ್ದ ಯುವಕನ ಪ್ರೀತಿಯನ್ನು ನಿರಾಕರಿಸಿದ ವಿವಾಹಿತ ಮಹಿಳೆಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಬಿಳಗುಳ ಗ್ರಾಮದ ವಿಶ್ವನಾಥ ಶೆಟ್ಟಿ ಎಂಬುವರ ಪುತ್ರಿ ಸವಿತಾ (40) ಪಾಗಲ್ ಪ್ರೇಮಿಯ ಪೈಶಾಚಿಕ ಕೃತ್ಯಕ್ಕೆ ಬಲಿಯಾದ ನತದೃಷ್ಟ ಮಹಿಳೆ.
ಸವಿತಾಳ ಮೇಲೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ ನಂದೀಶ್ಗೌಡನಿಗೆ ಸುಟ್ಟ ಗಾಯಗಳಾಗಿದ್ದು , ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿವಾಹಿತಳಾಗಿದ್ದ ಸವಿತಾ ಪತಿಯನ್ನು ತೊರೆದು ಬಿಳಗುಳದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಾ ಸಮೀಪದ ಕೊಲ್ಲಿ ಬೆಲ್ ಹೋಂ ಸ್ಟೇಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಳು.
ಪಕ್ಕದ ಎಸ್ಟೇಟ್ವೊಂದರಲ್ಲಿ ಚಾಲಕನಾಗಿದ್ದ 28 ವರ್ಷದ ನಂದೀಶ್ಗೌಡ 40 ವರ್ಷದ ಸವಿತಾಳನ್ನು ಪ್ರೀತಿಸುವಂತೆ ಪದೇ ಪದೇ ಒತ್ತಾಯಿಸುತ್ತಿದ್ದ ಎನ್ನಲಾಗಿದೆ.
ತನಗಿಂತ 12 ವರ್ಷ ಕಿರಿಯವನಾದ ನಂದೀಶ್ಗೌಡನನ್ನು ಪ್ರೀತಿಸಲು ಸವಿತಾ ನಿರಾಕರಿಸಿದ್ದಳು. ಸವಿತಾಳ ಈ ಧೋರಣೆಯಿಂದ ಕೋಪಗೊಂಡ ಪಾಗಲ್ ಪ್ರೇಮಿ ಕಳೆದ ಭಾನುವಾರ ಹೋಂ ಸ್ಟೇಯಲ್ಲಿ ಅಡುಗೆ ಕೆಲಸ ಮಾಡಿಕೊಂಡು ಮನೆಗೆ ಹಿಂದಿರುಗುತ್ತಿದ್ದ ಸವಿತಾಳ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ.
ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ಸವಿತಾ ಮತ್ತು ನಂದೀಶ್ಗೌಡನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸವಿತಾ ಮೃತಪಟ್ಟಿದ್ದಾಳೆ.
ನಂದೀಶ್ಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಆತನ ಪ್ರೀತಿ ನಿರಾಕರಿಸಿದ್ದಕ್ಕೆ ಈ ಕೃತ್ಯವೆಸಗಿದ್ದಾನೆ ಎಂದು ಸವಿತಾಳ ಸಹೋದರ ನಾಗೇಶ್ ರೈ ಪೋಲಿಸರಿಗೆ ದೂರು ನೀಡಿದ್ದಾರೆ.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm