ಬ್ರೇಕಿಂಗ್ ನ್ಯೂಸ್
15-06-24 09:11 pm HK News Desk ಕ್ರೈಂ
ರೂರ್ಕೆಲಾ, ಜೂ.15: ಒಡಿಶಾದ ಸುಂದರ್ಗಡ್ ಜಿಲ್ಲೆಯ ಕ್ಯಾಥೊಲಿಕ್ ಚರ್ಚ್ಗೆ ನುಗ್ಗಿದ ಅಪರಿಚಿತರು ಇಬ್ಬರು ಪಾದ್ರಿಗಳ ಮೇಲೆ ಹಲ್ಲೆ ನಡೆಸಿ, 10ಲಕ್ಷ ರೂ.ನಗದು ಲೂಟಿ ಮಾಡಿದ್ದಾರೆ.
ರೂರ್ಕೆಲಾದಿಂದ 25 ಕಿ.ಮೀ. ದೂರದಲ್ಲಿರುವ ಜರ್ಬಹಾಲ್ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಚರ್ಚ್ನ ಪಾದ್ರಿ ಮೇಲೆ ಹಲ್ಲೆ ನಡೆಸಿ, ಹಣವನ್ನು ಲೂಟಿ ಮಾಡಿದ್ದಾರೆ.



ಚರ್ಚ್ನ ಮುಖ್ಯ ದ್ವಾರವನ್ನು ಒಡೆದು ಒಳನುಗ್ಗಿದ ಆಗಂತುಕರು ಪಾದ್ರಿಯ ಕೊಠಡಿಗೆ ತೆರಳಿ ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಪಾದ್ರಿಗಳಾದ ಅಲಾಯ್ಸ್ ಕ್ಸಲೆಕ್ಸೊ (72) ಹಾಗೂ ನಿರಿಯಾಲ್ ಬೈಲುಂಗ್ (52) ಗಾಯಗೊಂಡಿದ್ದಾರೆ. ಇವರನ್ನು ರೂರ್ಕೆಲಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿ ನಿಲಯ ಹಾಗೂ ಶಾಲೆಗಳಿಂದ ಸಂಗ್ರಹಿಸಿದ ಶುಲ್ಕದ ಮೊತ್ತ 10 ಲಕ್ಷ ರೂ. ನಗದು ಚರ್ಚ್ನಲ್ಲಿತ್ತು. ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಚರ್ಚ್ನ ಮುಂಭಾಗ ಕಬ್ಬಿಣದ ಬಾಗಿಲನ್ನು ಮುರಿದು ಒಳನುಗ್ಗಿ, ಹಲ್ಲೆ ನಡೆಸಿದ ಗುಂಪಿನಲ್ಲಿ 10ರಿಂದ 12 ಜನರಿದ್ದರು. ಅವರು ಲಾಠಿ ಮತ್ತು ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು ಎಂದು ಫಾದರ್ ಕ್ಸಲೆಕ್ಸೊ ಮಾಹಿತಿ ನೀಡಿದ್ದಾರೆ.
Unidentified miscreants physically assaulted two priests and looted Rs 10 lakh from a catholic church in Odisha’s Sundergarh district, police said on Saturday. The injured fathers were identified as Alois Xalxo (72), and Nirial Bilung (52).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm