ಬ್ರೇಕಿಂಗ್ ನ್ಯೂಸ್
16-06-24 03:48 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 16: ಉದ್ಯಮಿಯೊಬ್ಬರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದಾಕೆ ಅಲ್ಲಿಂದಲೇ ಚಿನ್ನಾಭರಣ ಕದ್ದು ಅದನ್ನು ಚಿನ್ನದ ಗಟ್ಟಿಗಳನ್ನಾಗಿಸಿ ಮನೆಯಲ್ಲಿ ಬಚ್ಚಿಟ್ಟಿದ್ದ ಮಹಿಳೆಯನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೋಗುಪಾಳ್ಯ ನಿವಾಸಿ ಮಮತಾ (36) ಬಂಧಿತ ಆರೋಪಿ. 16 ಲಕ್ಷ ರೂಪಾಯಿ ಮೌಲ್ಯದ 225 ಗ್ರಾಂ ತೂಕದ 3 ಚಿನ್ನದ ಗಟ್ಟಿಗಳು ಹಾಗೂ 2 ಚಿನ್ನದ ಬಳೆಗಳನ್ನು ಈಕೆಯ ಬಳಿಯಿಂದ ಪೊಲೀಸರು ಜಪ್ತಿ ಮಾಡಿದ್ದಾರೆ.
ಜೋಗುಪಾಳ್ಯದ ಉದ್ಯಮಿ ಅಮರೇಂದ್ರ ಮನೆಯಲ್ಲಿ ಮಮತಾ ಕೆಲವು ವರ್ಷಗಳಿಂದ ಮನೆ ಕೆಲಸ ಮಾಡಿಕೊಂಡಿದ್ದಳು. 2023ರ ನ.25ರಂದು ಅಮರೇಂದ್ರ ಕುಟುಂಬದ ಸದಸ್ಯರ ಜತೆಗೆ ಹೊರಗಡೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಮಮತಾ ಮನೆಯ ಕಪಾಟಿನಲ್ಲಿದ್ದ ಕೀ ತೆಗೆದುಕೊಂಡು ಅದರಲ್ಲಿದ್ದ ಚಿನ್ನಾಭರಣ ಕದ್ದಿದ್ದಳು. ಕದ್ದ ಚಿನ್ನಾಭರಣಗಳನ್ನು ಕರಗಿಸಿ ಚಿನ್ನದ ಗಟ್ಟಿಗಳಾಗಿ ಮಾರ್ಪಡಿಸಿ ತನ್ನ ಮನೆಯಲ್ಲೇ ಇಟ್ಟುಕೊಂಡಿದ್ದಳು. ಮನೆಯವರು ಕಾರ್ಯಕ್ರಮ ಮುಗಿಸಿಕೊಂಡು ಮರಳಿ ತಿಂಗಳು ಕಳೆದರೂ ಕಪಾಟಿನಲ್ಲಿದ್ದ ಚಿನ್ನಾಭರಣ ಇಲ್ಲದಾಗಿರುವುದನ್ನು ಗಮನಿಸಿರಲಿಲ್ಲ. ಜೂನ್ 7ರಂದು ಅಮರೇಂದ್ರ ಕಪಾಟು ತೆರೆದು ನೋಡಿದಾಗ ಚಿನ್ನಾಭರಣ ಕಳುವಾಗಿತ್ತು.
ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಗೆ ಅಮರೇಂದ್ರ ದೂರು ನೀಡಿದ್ದರು. ಕೆಲಸದಾಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಪೊಲೀಸರು ಅನುಮಾನದ ಮೇರೆಗೆ ಕೆಲಸದಾಕೆ ಮಮತಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ
2023 ನವೆಂಬರ್ 25 ರಂದು ಮಮತಾ ಕಳ್ಳತನ ಮಡಿದ್ದರೂ ಅಮರೇಂದ್ರ ಅವರಿಗೆ ತಿಳಿದಿರುವುದು 6 ತಿಂಗಳ ಬಳಿಕ. ಕುಟುಂಬಸ್ಥರ ಜೊತೆಗೆ ತೆರಳಿದ್ದಾಗ ಮನೆಯಲ್ಲಿ ಮಮತಾ ಒಬ್ಬಳೇ ಇದ್ದ ಕಾರಣ ಆಕೆಯ ಮೇಲೆ ಅನುಮಾನ ಮೂಡಿತ್ತು. ಆಕೆಯ ಮನೆಯಲ್ಲಿ ಶೋಧ ನಡೆಸಿದಾಗ 3 ಚಿನ್ನದ ಗಟ್ಟಿಗಳು ಹಾಗೂ 2 ಚಿನ್ನದ ಬಳೆಗಳು ಬಚ್ಚಿಟ್ಟಿರುವುದು ಗೊತ್ತಾಗಿದೆ.
Police arrested a woman who was working as a housekeeper in the house of a businessman and stole gold jewelery from there and converted it into gold bars and hid it in the house.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm