ಬ್ರೇಕಿಂಗ್ ನ್ಯೂಸ್
16-06-24 03:48 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 16: ಉದ್ಯಮಿಯೊಬ್ಬರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದಾಕೆ ಅಲ್ಲಿಂದಲೇ ಚಿನ್ನಾಭರಣ ಕದ್ದು ಅದನ್ನು ಚಿನ್ನದ ಗಟ್ಟಿಗಳನ್ನಾಗಿಸಿ ಮನೆಯಲ್ಲಿ ಬಚ್ಚಿಟ್ಟಿದ್ದ ಮಹಿಳೆಯನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೋಗುಪಾಳ್ಯ ನಿವಾಸಿ ಮಮತಾ (36) ಬಂಧಿತ ಆರೋಪಿ. 16 ಲಕ್ಷ ರೂಪಾಯಿ ಮೌಲ್ಯದ 225 ಗ್ರಾಂ ತೂಕದ 3 ಚಿನ್ನದ ಗಟ್ಟಿಗಳು ಹಾಗೂ 2 ಚಿನ್ನದ ಬಳೆಗಳನ್ನು ಈಕೆಯ ಬಳಿಯಿಂದ ಪೊಲೀಸರು ಜಪ್ತಿ ಮಾಡಿದ್ದಾರೆ.
ಜೋಗುಪಾಳ್ಯದ ಉದ್ಯಮಿ ಅಮರೇಂದ್ರ ಮನೆಯಲ್ಲಿ ಮಮತಾ ಕೆಲವು ವರ್ಷಗಳಿಂದ ಮನೆ ಕೆಲಸ ಮಾಡಿಕೊಂಡಿದ್ದಳು. 2023ರ ನ.25ರಂದು ಅಮರೇಂದ್ರ ಕುಟುಂಬದ ಸದಸ್ಯರ ಜತೆಗೆ ಹೊರಗಡೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಮಮತಾ ಮನೆಯ ಕಪಾಟಿನಲ್ಲಿದ್ದ ಕೀ ತೆಗೆದುಕೊಂಡು ಅದರಲ್ಲಿದ್ದ ಚಿನ್ನಾಭರಣ ಕದ್ದಿದ್ದಳು. ಕದ್ದ ಚಿನ್ನಾಭರಣಗಳನ್ನು ಕರಗಿಸಿ ಚಿನ್ನದ ಗಟ್ಟಿಗಳಾಗಿ ಮಾರ್ಪಡಿಸಿ ತನ್ನ ಮನೆಯಲ್ಲೇ ಇಟ್ಟುಕೊಂಡಿದ್ದಳು. ಮನೆಯವರು ಕಾರ್ಯಕ್ರಮ ಮುಗಿಸಿಕೊಂಡು ಮರಳಿ ತಿಂಗಳು ಕಳೆದರೂ ಕಪಾಟಿನಲ್ಲಿದ್ದ ಚಿನ್ನಾಭರಣ ಇಲ್ಲದಾಗಿರುವುದನ್ನು ಗಮನಿಸಿರಲಿಲ್ಲ. ಜೂನ್ 7ರಂದು ಅಮರೇಂದ್ರ ಕಪಾಟು ತೆರೆದು ನೋಡಿದಾಗ ಚಿನ್ನಾಭರಣ ಕಳುವಾಗಿತ್ತು.
ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಗೆ ಅಮರೇಂದ್ರ ದೂರು ನೀಡಿದ್ದರು. ಕೆಲಸದಾಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಪೊಲೀಸರು ಅನುಮಾನದ ಮೇರೆಗೆ ಕೆಲಸದಾಕೆ ಮಮತಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ
2023 ನವೆಂಬರ್ 25 ರಂದು ಮಮತಾ ಕಳ್ಳತನ ಮಡಿದ್ದರೂ ಅಮರೇಂದ್ರ ಅವರಿಗೆ ತಿಳಿದಿರುವುದು 6 ತಿಂಗಳ ಬಳಿಕ. ಕುಟುಂಬಸ್ಥರ ಜೊತೆಗೆ ತೆರಳಿದ್ದಾಗ ಮನೆಯಲ್ಲಿ ಮಮತಾ ಒಬ್ಬಳೇ ಇದ್ದ ಕಾರಣ ಆಕೆಯ ಮೇಲೆ ಅನುಮಾನ ಮೂಡಿತ್ತು. ಆಕೆಯ ಮನೆಯಲ್ಲಿ ಶೋಧ ನಡೆಸಿದಾಗ 3 ಚಿನ್ನದ ಗಟ್ಟಿಗಳು ಹಾಗೂ 2 ಚಿನ್ನದ ಬಳೆಗಳು ಬಚ್ಚಿಟ್ಟಿರುವುದು ಗೊತ್ತಾಗಿದೆ.
Police arrested a woman who was working as a housekeeper in the house of a businessman and stole gold jewelery from there and converted it into gold bars and hid it in the house.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm