ಬ್ರೇಕಿಂಗ್ ನ್ಯೂಸ್
18-06-24 01:47 pm Mangalore Correspondent ಕ್ರೈಂ
ಮಂಗಳೂರು, ಜೂನ್ 18: ವಾಟ್ಸಪ್ ಗ್ರೂಪಿನಲ್ಲಿ ಬಂದ ಮೆಸೇಜ್ ಆಧರಿಸಿ ವ್ಯಕ್ತಿಯೊಬ್ಬರು ಬರೋಬ್ಬರಿ 17.57 ಲಕ್ಷ ರೂಪಾಯಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವ ಘಟನೆ ನಡೆದಿದ್ದು, ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2024ರ ಮಾರ್ಚ್ 23ರಂದು ವ್ಯಕ್ತಿಯ ಮೊಬೈಲ್ ವಾಟ್ಸಪ್ ಗೆ Alice –LRC ಎಂಬ ವಾಟ್ಸಪ್ ಗ್ರೂಪ್ ಲಿಂಕ್ ಬಂದಿತ್ತು. ಅದಕ್ಕೆ ಸೇರಿಕೊಂಡ ಬಳಿಕ ಷೇರು ಮಾರುಕಟ್ಟೆಯಲ್ಲಿ ಡಿಸ್ಕೌಂಟ್ ಬೆಲೆಗ ಷೇರುಗಳನ್ನು ಮಾರಾಟ ಮಾಡುವುದಾಗಿ ಪದೇ ಪದೇ ಮೆಸೇಜ್ ಗಳು ಬಂದಿದ್ದವು. ಇದನ್ನು ನಂಬಿದ ಮಡಂತ್ಯಾರಿನ ವ್ಯಕ್ತಿ Alice –LRC ಎಂಬ ಕಂಪನಿಯಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ.
ಅಧಿಕ ಲಾಭ ಸಿಗುತ್ತೆ ಎಂದು ಲೆಕ್ಕ ಹಾಕಿ, ತನ್ನ ಬ್ಯಾಂಕ್ ಖಾತೆಗಳಿಂದ ಆರೋಪಿಗಳು ಸೂಚಿಸಿದಂತೆ ಹಣವನ್ನು ವರ್ಗಾಯಿಸಿದ್ದಾರೆ. ಹಂತ ಹಂತವಾಗಿ ಒಟ್ಟು 17,57,000 ರೂಪಾಯಿ ಹಣವನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದು, ಹೂಡಿಕೆ ಮಾಡಿದ್ದಾರೆ. ಆನಂತರ ಆರೋಪಿಗಳು ಇನ್ನೂ ಹೆಚ್ಚಿನ ಮೊತ್ತ ಹಾಕುವಂತೆ ತಿಳಿಸಿದ್ದಾರೆ. ಈ ವ್ಯಕ್ತಿ ತಾನು ಹಾಕಿದ ಹಣ ಮರಳಿಸಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಅಷ್ಟರಲ್ಲಿ ತಾನು ಮೋಸ ಹೋಗಿದ್ದಾಗಿ ತಿಳಿದು ವ್ಯಕ್ತಿ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾನಾ ರೀತಿ ಆಮಿಷ ತೋರಿಸಿ ಖೆಡ್ಡಾ
ವಾಟ್ಸಪ್ ಗ್ರೂಪ್ ಗಳಿಗೆ ಸೇರಿಸುವುದು, ಹಣ ಹೂಡಿಕೆ ಮಾಡುವಂತೆ ಪದೇ ಪದೇ ಒತ್ತಾಯಿಸುವುದು, ಷೇರು ಮಾರುಕಟ್ಟೆಯ ಆಮಿಷ ತೋರಿಸುವುದು, ವಾಟ್ಸಪ್ ಪರ್ಸನಲ್ ಮೆಸೇಜ್ ಮಾಡಿ ಪಾರ್ಟ್ ಟೈಮ್ ಜಾಬ್ ಆಫರ್ ನೀಡುವುದು ಇತ್ಯಾದಿ ರೀತಿಯಲ್ಲಿ ಸಾರ್ವಜನಿಕರನ್ನು ಮೋಸಗೊಳಿಸುವ ಜಾಲ ಸಕ್ರಿಯವಾಗಿದ್ದು, ಸೈಬರ್ ವಂಚಕರು ಉತ್ತರ ಭಾರತದಲ್ಲಿ ಕುಳಿತೇ ಹಣವನ್ನು ದೋಚುತ್ತಿದ್ದಾರೆ. ಅಪರಿಚಿತರು ಮೆಸೇಜ್ ಮಾಡಿದರೆ, ವಾಟ್ಸಪ್ ಗ್ರೂಪುಗಳಿಗೆ ಸೇರಿಸಿ ಹಣ ಹೂಡಿಕೆ ಮಾಡಲು ಹೇಳಿದರೆ ಅದಕ್ಕೆ ಸ್ಪಂದಿಸದೆ ಇರುವುದು ಉತ್ತಮ ಎಂದು ಸೈಬರ್ ತಜ್ಞರು ಹೇಳುತ್ತಾರೆ.
Mangalore Online WhatsApp fraud on stock market, man looses 17 lakhs rs from Madanthyar who believed in fraud stock market and invested. A case has been registered at cyber police station in Mangalore.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm