ಬ್ರೇಕಿಂಗ್ ನ್ಯೂಸ್
18-06-24 01:47 pm Mangalore Correspondent ಕ್ರೈಂ
ಮಂಗಳೂರು, ಜೂನ್ 18: ವಾಟ್ಸಪ್ ಗ್ರೂಪಿನಲ್ಲಿ ಬಂದ ಮೆಸೇಜ್ ಆಧರಿಸಿ ವ್ಯಕ್ತಿಯೊಬ್ಬರು ಬರೋಬ್ಬರಿ 17.57 ಲಕ್ಷ ರೂಪಾಯಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವ ಘಟನೆ ನಡೆದಿದ್ದು, ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2024ರ ಮಾರ್ಚ್ 23ರಂದು ವ್ಯಕ್ತಿಯ ಮೊಬೈಲ್ ವಾಟ್ಸಪ್ ಗೆ Alice –LRC ಎಂಬ ವಾಟ್ಸಪ್ ಗ್ರೂಪ್ ಲಿಂಕ್ ಬಂದಿತ್ತು. ಅದಕ್ಕೆ ಸೇರಿಕೊಂಡ ಬಳಿಕ ಷೇರು ಮಾರುಕಟ್ಟೆಯಲ್ಲಿ ಡಿಸ್ಕೌಂಟ್ ಬೆಲೆಗ ಷೇರುಗಳನ್ನು ಮಾರಾಟ ಮಾಡುವುದಾಗಿ ಪದೇ ಪದೇ ಮೆಸೇಜ್ ಗಳು ಬಂದಿದ್ದವು. ಇದನ್ನು ನಂಬಿದ ಮಡಂತ್ಯಾರಿನ ವ್ಯಕ್ತಿ Alice –LRC ಎಂಬ ಕಂಪನಿಯಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ.
ಅಧಿಕ ಲಾಭ ಸಿಗುತ್ತೆ ಎಂದು ಲೆಕ್ಕ ಹಾಕಿ, ತನ್ನ ಬ್ಯಾಂಕ್ ಖಾತೆಗಳಿಂದ ಆರೋಪಿಗಳು ಸೂಚಿಸಿದಂತೆ ಹಣವನ್ನು ವರ್ಗಾಯಿಸಿದ್ದಾರೆ. ಹಂತ ಹಂತವಾಗಿ ಒಟ್ಟು 17,57,000 ರೂಪಾಯಿ ಹಣವನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದು, ಹೂಡಿಕೆ ಮಾಡಿದ್ದಾರೆ. ಆನಂತರ ಆರೋಪಿಗಳು ಇನ್ನೂ ಹೆಚ್ಚಿನ ಮೊತ್ತ ಹಾಕುವಂತೆ ತಿಳಿಸಿದ್ದಾರೆ. ಈ ವ್ಯಕ್ತಿ ತಾನು ಹಾಕಿದ ಹಣ ಮರಳಿಸಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಅಷ್ಟರಲ್ಲಿ ತಾನು ಮೋಸ ಹೋಗಿದ್ದಾಗಿ ತಿಳಿದು ವ್ಯಕ್ತಿ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾನಾ ರೀತಿ ಆಮಿಷ ತೋರಿಸಿ ಖೆಡ್ಡಾ
ವಾಟ್ಸಪ್ ಗ್ರೂಪ್ ಗಳಿಗೆ ಸೇರಿಸುವುದು, ಹಣ ಹೂಡಿಕೆ ಮಾಡುವಂತೆ ಪದೇ ಪದೇ ಒತ್ತಾಯಿಸುವುದು, ಷೇರು ಮಾರುಕಟ್ಟೆಯ ಆಮಿಷ ತೋರಿಸುವುದು, ವಾಟ್ಸಪ್ ಪರ್ಸನಲ್ ಮೆಸೇಜ್ ಮಾಡಿ ಪಾರ್ಟ್ ಟೈಮ್ ಜಾಬ್ ಆಫರ್ ನೀಡುವುದು ಇತ್ಯಾದಿ ರೀತಿಯಲ್ಲಿ ಸಾರ್ವಜನಿಕರನ್ನು ಮೋಸಗೊಳಿಸುವ ಜಾಲ ಸಕ್ರಿಯವಾಗಿದ್ದು, ಸೈಬರ್ ವಂಚಕರು ಉತ್ತರ ಭಾರತದಲ್ಲಿ ಕುಳಿತೇ ಹಣವನ್ನು ದೋಚುತ್ತಿದ್ದಾರೆ. ಅಪರಿಚಿತರು ಮೆಸೇಜ್ ಮಾಡಿದರೆ, ವಾಟ್ಸಪ್ ಗ್ರೂಪುಗಳಿಗೆ ಸೇರಿಸಿ ಹಣ ಹೂಡಿಕೆ ಮಾಡಲು ಹೇಳಿದರೆ ಅದಕ್ಕೆ ಸ್ಪಂದಿಸದೆ ಇರುವುದು ಉತ್ತಮ ಎಂದು ಸೈಬರ್ ತಜ್ಞರು ಹೇಳುತ್ತಾರೆ.
Mangalore Online WhatsApp fraud on stock market, man looses 17 lakhs rs from Madanthyar who believed in fraud stock market and invested. A case has been registered at cyber police station in Mangalore.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm