ಬ್ರೇಕಿಂಗ್ ನ್ಯೂಸ್
18-06-24 01:47 pm Mangalore Correspondent ಕ್ರೈಂ
ಮಂಗಳೂರು, ಜೂನ್ 18: ವಾಟ್ಸಪ್ ಗ್ರೂಪಿನಲ್ಲಿ ಬಂದ ಮೆಸೇಜ್ ಆಧರಿಸಿ ವ್ಯಕ್ತಿಯೊಬ್ಬರು ಬರೋಬ್ಬರಿ 17.57 ಲಕ್ಷ ರೂಪಾಯಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವ ಘಟನೆ ನಡೆದಿದ್ದು, ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2024ರ ಮಾರ್ಚ್ 23ರಂದು ವ್ಯಕ್ತಿಯ ಮೊಬೈಲ್ ವಾಟ್ಸಪ್ ಗೆ Alice –LRC ಎಂಬ ವಾಟ್ಸಪ್ ಗ್ರೂಪ್ ಲಿಂಕ್ ಬಂದಿತ್ತು. ಅದಕ್ಕೆ ಸೇರಿಕೊಂಡ ಬಳಿಕ ಷೇರು ಮಾರುಕಟ್ಟೆಯಲ್ಲಿ ಡಿಸ್ಕೌಂಟ್ ಬೆಲೆಗ ಷೇರುಗಳನ್ನು ಮಾರಾಟ ಮಾಡುವುದಾಗಿ ಪದೇ ಪದೇ ಮೆಸೇಜ್ ಗಳು ಬಂದಿದ್ದವು. ಇದನ್ನು ನಂಬಿದ ಮಡಂತ್ಯಾರಿನ ವ್ಯಕ್ತಿ Alice –LRC ಎಂಬ ಕಂಪನಿಯಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ.
ಅಧಿಕ ಲಾಭ ಸಿಗುತ್ತೆ ಎಂದು ಲೆಕ್ಕ ಹಾಕಿ, ತನ್ನ ಬ್ಯಾಂಕ್ ಖಾತೆಗಳಿಂದ ಆರೋಪಿಗಳು ಸೂಚಿಸಿದಂತೆ ಹಣವನ್ನು ವರ್ಗಾಯಿಸಿದ್ದಾರೆ. ಹಂತ ಹಂತವಾಗಿ ಒಟ್ಟು 17,57,000 ರೂಪಾಯಿ ಹಣವನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದು, ಹೂಡಿಕೆ ಮಾಡಿದ್ದಾರೆ. ಆನಂತರ ಆರೋಪಿಗಳು ಇನ್ನೂ ಹೆಚ್ಚಿನ ಮೊತ್ತ ಹಾಕುವಂತೆ ತಿಳಿಸಿದ್ದಾರೆ. ಈ ವ್ಯಕ್ತಿ ತಾನು ಹಾಕಿದ ಹಣ ಮರಳಿಸಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಅಷ್ಟರಲ್ಲಿ ತಾನು ಮೋಸ ಹೋಗಿದ್ದಾಗಿ ತಿಳಿದು ವ್ಯಕ್ತಿ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾನಾ ರೀತಿ ಆಮಿಷ ತೋರಿಸಿ ಖೆಡ್ಡಾ
ವಾಟ್ಸಪ್ ಗ್ರೂಪ್ ಗಳಿಗೆ ಸೇರಿಸುವುದು, ಹಣ ಹೂಡಿಕೆ ಮಾಡುವಂತೆ ಪದೇ ಪದೇ ಒತ್ತಾಯಿಸುವುದು, ಷೇರು ಮಾರುಕಟ್ಟೆಯ ಆಮಿಷ ತೋರಿಸುವುದು, ವಾಟ್ಸಪ್ ಪರ್ಸನಲ್ ಮೆಸೇಜ್ ಮಾಡಿ ಪಾರ್ಟ್ ಟೈಮ್ ಜಾಬ್ ಆಫರ್ ನೀಡುವುದು ಇತ್ಯಾದಿ ರೀತಿಯಲ್ಲಿ ಸಾರ್ವಜನಿಕರನ್ನು ಮೋಸಗೊಳಿಸುವ ಜಾಲ ಸಕ್ರಿಯವಾಗಿದ್ದು, ಸೈಬರ್ ವಂಚಕರು ಉತ್ತರ ಭಾರತದಲ್ಲಿ ಕುಳಿತೇ ಹಣವನ್ನು ದೋಚುತ್ತಿದ್ದಾರೆ. ಅಪರಿಚಿತರು ಮೆಸೇಜ್ ಮಾಡಿದರೆ, ವಾಟ್ಸಪ್ ಗ್ರೂಪುಗಳಿಗೆ ಸೇರಿಸಿ ಹಣ ಹೂಡಿಕೆ ಮಾಡಲು ಹೇಳಿದರೆ ಅದಕ್ಕೆ ಸ್ಪಂದಿಸದೆ ಇರುವುದು ಉತ್ತಮ ಎಂದು ಸೈಬರ್ ತಜ್ಞರು ಹೇಳುತ್ತಾರೆ.
Mangalore Online WhatsApp fraud on stock market, man looses 17 lakhs rs from Madanthyar who believed in fraud stock market and invested. A case has been registered at cyber police station in Mangalore.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm