ಬ್ರೇಕಿಂಗ್ ನ್ಯೂಸ್
22-06-24 11:24 pm HK News Desk ಕ್ರೈಂ
ತುಮಕೂರು, ಜೂ 22: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಆಗಿದ್ದು, ಕೆರೆಯ ದಡದಲ್ಲಿ ಇಬ್ಬರ ಚಪ್ಪಲಿಗಳು ಪತ್ತೆಯಾಗಿವೆ. ಕೆರೆ ಬಳಿ ಕಾರು ನಿಲ್ಲಿಸಿ ಮೊಬೈಲ್ಗಳನ್ನು ಕಾರಿನೊಳಗೆ ಇಟ್ಟು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಘಟನೆ ನಡೆದಿದೆ.
ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ (19) ಹಾಗೂ ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ (50) ನಾಪತ್ತೆಯಾದವರು. ವಯಸ್ಸಿನ ಅಂತರ ಇದ್ದರೂ, ಇವರಿಬ್ಬರ ನಡುವೆ ಅದ್ಹೇಗೋ ಪ್ರೀತಿ ಚಿಗುರಿತ್ತು. ಕದ್ದುಮುಚ್ಚಿ ಇದ್ದ ಇವರಿಬ್ಬರ ಪ್ರೀತಿ ಕುಟುಂಬಸ್ಥರಿಗೆ ತಿಳಿದುಹೋಗಿತ್ತು. ಈ ಪ್ರೀತಿಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರಿಂದ, ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಎನ್ನಲಾಗಿದೆ.
ಕಳೆದ 3 ದಿನಗಳ ಹಿಂದೆ ಅನನ್ಯ ಮನೆಯಿಂದ ನಾಪತ್ತೆಯಾಗಿದ್ದಳು. ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದ್ದರು. ಈ ನಡುವೆ ಮಾವತ್ತೂರು ಕೆರೆ ಬಳಿ ಆಕೆಯ ಚಪ್ಪಲಿ ಪತ್ತೆಯಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೋಟ್ ಸಹಾಯದಿಂದ ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ.
ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಕೊಳಾಲ ಪಿಎಸ್ಐ ರೇಣುಕಾ ಯಾದವ್, ಯೋಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೂ ಈ ವಿಷಯ ಎಲ್ಲೆಡೆ ಹಬ್ಬುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಕೊಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Tumkur, a 19-year-old girl, falls in love with a 50-year-old man. The two commit suicide after jumping into the lake. The deceased have been identified as Annanya and Rangashamanna. Parents have been searching for their missing daughter for three days, and today the public found some sandals near the lake and later found the body.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 02:47 pm
Mangalore Correspondent
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm