ಬ್ರೇಕಿಂಗ್ ನ್ಯೂಸ್
22-06-24 11:24 pm HK News Desk ಕ್ರೈಂ
ತುಮಕೂರು, ಜೂ 22: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಆಗಿದ್ದು, ಕೆರೆಯ ದಡದಲ್ಲಿ ಇಬ್ಬರ ಚಪ್ಪಲಿಗಳು ಪತ್ತೆಯಾಗಿವೆ. ಕೆರೆ ಬಳಿ ಕಾರು ನಿಲ್ಲಿಸಿ ಮೊಬೈಲ್ಗಳನ್ನು ಕಾರಿನೊಳಗೆ ಇಟ್ಟು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಘಟನೆ ನಡೆದಿದೆ.
ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ (19) ಹಾಗೂ ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ (50) ನಾಪತ್ತೆಯಾದವರು. ವಯಸ್ಸಿನ ಅಂತರ ಇದ್ದರೂ, ಇವರಿಬ್ಬರ ನಡುವೆ ಅದ್ಹೇಗೋ ಪ್ರೀತಿ ಚಿಗುರಿತ್ತು. ಕದ್ದುಮುಚ್ಚಿ ಇದ್ದ ಇವರಿಬ್ಬರ ಪ್ರೀತಿ ಕುಟುಂಬಸ್ಥರಿಗೆ ತಿಳಿದುಹೋಗಿತ್ತು. ಈ ಪ್ರೀತಿಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರಿಂದ, ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಎನ್ನಲಾಗಿದೆ.
ಕಳೆದ 3 ದಿನಗಳ ಹಿಂದೆ ಅನನ್ಯ ಮನೆಯಿಂದ ನಾಪತ್ತೆಯಾಗಿದ್ದಳು. ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದ್ದರು. ಈ ನಡುವೆ ಮಾವತ್ತೂರು ಕೆರೆ ಬಳಿ ಆಕೆಯ ಚಪ್ಪಲಿ ಪತ್ತೆಯಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೋಟ್ ಸಹಾಯದಿಂದ ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ.
ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಕೊಳಾಲ ಪಿಎಸ್ಐ ರೇಣುಕಾ ಯಾದವ್, ಯೋಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೂ ಈ ವಿಷಯ ಎಲ್ಲೆಡೆ ಹಬ್ಬುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಕೊಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Tumkur, a 19-year-old girl, falls in love with a 50-year-old man. The two commit suicide after jumping into the lake. The deceased have been identified as Annanya and Rangashamanna. Parents have been searching for their missing daughter for three days, and today the public found some sandals near the lake and later found the body.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm