ಬ್ರೇಕಿಂಗ್ ನ್ಯೂಸ್
24-06-24 11:33 am HK News Desk ಕ್ರೈಂ
ಶಿವಮೊಗ್ಗ, ಜೂನ್ 24: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಎಂಬಾತನನ್ನು ಬಂಧಿಸಲಾಗಿದೆ.
ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಈತನನ್ನು ಬಂಧಿಸಿದ್ದಾರೆ, ಅರುಣ್ ಕುಗ್ವೆ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೆ ಅವರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರು. ಆದರೆ ಕಳೆದೆರೆಡು ತಿಂಗಳ ಹಿಂದೆ ಅರುಣ್ ಪ್ರೀತಿಸಿದ ಯುವತಿಯನ್ನು ಬಿಟ್ಟು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದನ್ನು ಅರಿತ ಮೋಸ ಹೋದ ಯುವತಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಮಧ್ಯೆ, ಇವರಿಬ್ಬರ ನಡುವೆ ರಾಜಿ ಪಂಚಾಯತಿ ನಡೆದಿತ್ತು ಎನ್ನಲಾಗಿದೆ. ಎರಡು ದಿನಗಳ ಹಿಂದೆ ನೊಂದ ಯುವತಿ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನು ದಾಖಲಿಸಿಕೊಂಡ ಪೊಲೀಸರು ಅರುಣ್ ಕುಗ್ವೆಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ನಿಜಾಂಶ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ವಿಚಾರಣೆ ಬಳಿಕ ಆರೋಪಿ ಅರುಣ್ ಕುಗ್ವೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸದ್ಯ ಅರುಣ್ ಕುಗ್ವೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಬಿಜೆಪಿ ಮುಖಂಡ ಅರುಣ್ ಕುಗ್ವೆ ಅವರಿಗೆ ಇದೇ ಜೂನ್ 28ಕ್ಕೆ ಮದುವೆ ಫಿಕ್ಸ್ ಆಗಿತ್ತು. ಈ ನಡುವೆ, ಯುವತಿ ನೀಡಿದ ದೂರಿನಂತೆ ಅರುಣ್ ಬಂಧನ ಆಗಿದ್ದು ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದಾನೆ.
Shivamogga District BJP Yuva Morcha Secretary Arun Kugve has been arrested by the women's police station on the charge of sexually assaulting a young woman on the pretext of marrying her. Arun Kugve is a resident of Sagar in Karnataka's Shivamogga.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm