ಬ್ರೇಕಿಂಗ್ ನ್ಯೂಸ್
24-06-24 04:51 pm Mangalore Correspondent ಕ್ರೈಂ
ಮಂಗಳೂರು, ಜೂನ್.24: ಉಳಾಯಿಬೆಟ್ಟು ಪೆರ್ಮಂಕಿಯಲ್ಲಿ ಕಲ್ಲು ಕೋರೆ ಉದ್ಯಮಿ ಪದ್ಮನಾಭ ಕೋಟ್ಯಾನ್ ಮನೆಗೆ ನುಗ್ಗಿದ್ದ ದರೋಡೆಕೋರರು ಕೋಟ್ಯಂತರ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚುವ ಯೋಜನೆ ರೂಪಿಸಿದ್ದರು ಎನ್ನುವ ಅನುಮಾನ ಮೂಡಿದೆ. ಮನೆಯಲ್ಲಿ ಐದಾರು ಕೋಟಿ ರೂಪಾಯಿ ಹಣ ನಗದು ರೂಪದಲ್ಲೇ ಇರಬಹುದು ಎಂಬ ಲೆಕ್ಕ ಹಾಕಿದ್ದ ದರೋಡೆಕೋರರು ಅದನ್ನು ಹೊತ್ತೂಯ್ಯಲು ಗೋಣಿ ಚೀಲ ತಂದಿದ್ದರು ಎಂಬ ಅಂಶ ತಿಳಿದುಬಂದಿದೆ.
ಆದರೆ ದರೋಡೆಕೋರರು ನಿರೀಕ್ಷಿದಷ್ಟು ನಗದು ಹಣ ಸಿಗಲಿಲ್ಲ ಎನ್ನಲಾಗುತ್ತಿದೆ. ಕೃತ್ಯದ ಸಂದರ್ಭದಲ್ಲಿ ಮನೆಯವರನ್ನು ಪದೇ ಪದೆ ಹಣ ಎಲ್ಲಿದೆ ಎಂದು ಪ್ರಶ್ನಿಸಿದ್ದು ಯಜಮಾನ ಪದ್ಮನಾಭ ಕೋಟ್ಯಾನ್ ಮೇಲೆ ಅದೇ ಕಾರಣಕ್ಕೆ ಅರ್ಧ ಗಂಟೆ ಕಾಲ ಹಲ್ಲೆ ಮಾಡಿದ್ದಾರೆ. ಅಲ್ಲದೆ, ಮನೆಯನ್ನು ಪೂರ್ತಿಯಾಗಿ ಜಾಲಾಡಿದ್ದಾರೆ. ಹಾಸಿಗೆ, ಕಪಾಟಿನ ಅಡಿ ಭಾಗದಲ್ಲಿಯೂ ಹುಡುಕಿದ್ದಾರೆ. ಭಾರೀ ಹಣವನ್ನು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದಾರೆ ಎಂಬ ಮಾಹಿತಿ ಇದ್ದೇ ಕಳ್ಳರು ದರೋಡೆಗೆ ಸ್ಕೆಚ್ ಹಾಕಿದಂತಿದೆ. ಇದರಿಂದಾಗಿ ಕೃತ್ಯದಲ್ಲಿ ಸ್ಥಳೀಯ ಸಂಪರ್ಕ ಇರುವ ವ್ಯಕ್ತಿಗಳು ಶಾಮೀಲಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮನೆಯಲ್ಲಿರುವ ಸಿಸಿಟಿವಿಯಲ್ಲಿ ದರೋಡೆಕೋರರ ಕೃತ್ಯದ ಕೆಲವು ದೃಶ್ಯಗಳು ದಾಖಲಾಗಿವೆ. ಮುಖಕ್ಕೆ ಮಾಸ್ಕ್ ಹಾಕಿರುವುದರಿಂದ ಸ್ಪಷ್ಟ ಚಹರೆ ಸಿಕ್ಕಿಲ್ಲ. ಒಬ್ಬ ಮಾತ್ರ ಮುಖದ ಮಾಸ್ಕ್ ಅನ್ನು ಕೆಳಗೆ ಇಳಿಸಿದ್ದ. ಸಿಸಿಟಿವಿಯಲ್ಲಿ ಬರುತ್ತೆ ಎಂದು ಡಿವಿಆರ್ ಹೊತ್ತೊಯ್ಯಲು ಪ್ಲಾನ್ ಮಾಡಿದ್ದರು. ಕೊನೆ ಕ್ಷಣದ ಅರ್ಜೆಂಟಲ್ಲಿ ಡಿವಿಆರ್ ಬದಲು ಅಲ್ಲಿದ್ದ ಮಾಡೆಮ್ ಅನ್ನು ಕಿತ್ತುಕೊಂಡು ಹೋಗಿದ್ದಾರೆ. ಹೊರಗಡೆ ಸ್ವಲ್ಪ ದೂರದಲ್ಲಿ ತಮ್ಮ ವಾಹನ ನಿಲ್ಲಿಸಿದ್ದರಿಂದ ಅದರ ಕುರಿತಾಗಿಯೂ ಪೂರ್ಣ ಚಿತ್ರಣ ಸಿಸಿಟಿವಿಯಲ್ಲಿ ಲಭಿಸಿಲ್ಲ. ಪೊಲೀಸರು ಪರಾರಿಯಾದ ವಾಹನದ ಚಿತ್ರವನ್ನು ಬಂಟ್ವಾಳಕ್ಕೆ ಸಾಗುವಲ್ಲಿ ರಸ್ತೆ ಬದಿಯೊಂದರ ಕಟ್ಟಡದ ಸಿಸಿ ಟಿವಿಯಲ್ಲಿ ಪತ್ತೆ ಮಾಡಿದ್ದು, ಅದನ್ನು ಪೊಲೀಸರು ಪರಿಶೀಲಿಸಿದ್ದಾರೆ.
2021ರಲ್ಲಿ ದರೋಡೆ, ಮೂರೇ ದಿನದಲ್ಲಿ ಬಂಧನ
2021ರ ಮಾರ್ಚ್ನಲ್ಲಿ ಮೂಡುಬಿದಿರೆ, ಬಜಪೆ ಮತ್ತು ಮೂಲ್ಕಿ ಠಾಣೆ ವ್ಯಾಪ್ತಿಯ ಹಲವೆಡೆ ದರೋಡೆ, ಕಳ್ಳತನ ನಡೆಸಿದ್ದ ಗ್ಯಾಂಗಿನ 9 ಮಂದಿಯನ್ನು ಪೊಲೀಸರು ಮೂರು ದಿನಗಳಲ್ಲಿ ಬಂಧಿಸಿದ್ದರು. ಕಳ್ಳರ ತಂಡವು ಫಾರ್ಮ್ ಹೌಸ್, ಗೋದಾಮು, ಮನೆಗಳಲ್ಲಿ ಭಾರೀ ಪ್ರಮಾಣದಲ್ಲಿ ಹಣ ಸಂಗ್ರಹಿಸುತ್ತಿದ್ದವರ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸುತ್ತಿತ್ತು. ಇದೀಗ ಅದೇ ಮಾದರಿಯಲ್ಲಿ ದರೋಡೆ ನಡೆದಿರುವಂತೆ ಕಂಡುಬಂದಿದೆ.
ಧರ್ಮಸ್ಥಳ ಬಳಿಯ ಸೌತಡ್ಕದಲ್ಲಿ 2020ರ ಡಿಸೆಂಬರ್ನಲ್ಲಿ ರಾತ್ರಿ ವೇಳೆ ಯಜಮಾನನ್ನು ಕಟ್ಟಿ ಹಾಕಿ ಮನೆಯೊಡತಿಗೆ ಚೂರಿಯಿಂದ ಇರಿದು ದರೋಡೆ ನಡೆಸಿದ್ದ ತಂಡ, ಅಡಿಕೆ ಮಾರಾಟ ಮಾಡಿ ಕೂಡಿಟ್ಟಿದ್ದ ನಗದು ಹಣ ಮತ್ತು ಚಿನ್ನಾಭರಣ ದೋಚಿತ್ತು. ಸುಮಾರು 9 ಮಂದಿ ದರೋಡೆಕೋರರ ತಂಡ ಮನೆಯವರನ್ನು ಬೆದರಿಸಿ ಕಪಾಟಿನ ಕೀಲಿ ಕೈಯನ್ನು ಪಡೆದಿತ್ತು. ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.
Mangalore Ulaibettu dacoity, accused carried gunny bags expecting crores in cash, locals involved. In a dramatic turn of events, it has been revealed that the dacoits who raided the house of an entrepreneur in Permanki, Ulaibettu, on Friday night, had plans to loot crores of rupees. The dacoits, armed with gunny bags, believed there were crores of rupees in cash stored in the house.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am