ಬ್ರೇಕಿಂಗ್ ನ್ಯೂಸ್
26-06-24 06:15 pm HK News Desk ಕ್ರೈಂ
ಮೈಸೂರು, ಜೂನ್ 26: ಮೈಸೂರು ಜಿಲ್ಲೆಯ ಚಾಮರಾಜ ನಗರ ಕ್ಷೇತ್ರದ ಶಾಸಕ ಹರೀಶ್ ಗೌಡ ಮತ್ತು ಇತರ ಪ್ರಭಾವಿಗಳಿಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಎನ್ನುವವರನ್ನ ಬಂಧಿಸಲಾಗಿದೆ. ಯಾರಾದ್ರೂ ವಿಐಪಿಗಳು ಹೊಟೇಲ್ ಬುಕ್ ಮಾಡಿ ಖಾಲಿಯಾದ ಬಳಿಕ ಅದೇ ರೂಮ್ ಪಡೆಯುತ್ತಿದ್ದ ಆರೋಪಿಗಳು ಯುವತಿಯನ್ನು ಬಳಸಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದು ವಿಐಪಿ ವ್ಯಕ್ತಿಗೆ ತೋರಿಸಿ ಬ್ಲಾಕ್ಮೇಲ್ ಮಾಡುತ್ತಿದ್ದರಂತೆ.
ಪ್ರಕರಣದ ಬಗ್ಗೆ ಶಾಸಕ ಹರೀಶ್ ಗೌಡ ಸ್ಪಷ್ಟನೆ ನೀಡಿದ್ದು, ನನ್ನ ಮೇಲೆ ಹನಿಟ್ರ್ಯಾಪ್ ನಡೆದಿಲ್ಲ. ನನ್ನ ಕ್ಷೇತ್ರದ ಹಲವರಿಗೆ ಹನಿಟ್ರ್ಯಾಪ್ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ತನಿಖೆ ಮಾಡಲು ಹೇಳಿದ್ದೆ. ಉದ್ಯಮಿಗಳು, ವಿಐಪಿಗಳು, ಪ್ರೊಫೆಸರ್ಗಳನ್ನೇ ಇವರು ಟಾರ್ಗೆಟ್ ಮಾಡುತ್ತಿದ್ದು ಮೈಸೂರು, ಬೆಂಗಳೂರಿಗೆ ಬಂದಾಗ ಕೃತ್ಯ ಎಸಗುತ್ತಿದ್ದರು. ಈ ಬಗ್ಗೆ ಪೊಲೀಸ್ ಕಮಿಷನರ್ಗೆ, ಸಿಸಿಬಿ ಪೊಲೀಸರಿಗೆ ಅವರ ಮೂಲಕ ದೂರು ಕೊಡಿಸಿದ್ದೆ. ಅದರಂತೆ ಇಬ್ಬರನ್ನ ಬಂಧಿಸಿದ್ದಾರೆ ಅಂತ ಮಾಹಿತಿ ಬಂದಿದೆ ಎಂದು ತಿಳಿಸಿದರು.
ಹನಿಟ್ರ್ಯಾಪ್ ಪ್ರಕರಣದ ಕುರಿತಂತೆ ಮೈಸೂರು ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರು, ಕೆಲವು ದಿನಗಳ ಹಿಂದೆ ಗ್ಯಾಂಗ್ ಒಂದು ಕೆಲವು ಅಂಶಗಳನ್ನು ಮುಂದಿಟ್ಟು ಬ್ಲ್ಯಾಕ್ ಮೇಲ್ ಮಾಡ್ತಿದ್ದಾರೆ ಅಂತ ದೂರು ಬಂದಿತ್ತು. ಪ್ರಕರಣ ದಾಖಲಿಸಿ ಆರೋಪಿಗಳನ್ನ ಬಂಧಿಸಿದ್ದು ಹೇಳಿಕೆಗಳನ್ನ ಪಡೆದುಕೊಂಡಿದ್ದೇವೆ. ಗ್ಯಾಂಗ್ ನಲ್ಲಿ ಇದುವರೆಗೂ ಮೂವರು ಇದ್ದದ್ದು ಪತ್ತೆಯಾಗಿದೆ. ಮತ್ತೊಬ್ಬರು ಪರಾರಿಯಾಗಿದ್ದಾರೆ. ಬೇರೆ ಬೇರೆ ನಂಬರ್ ಗಳನ್ನ ಬಳಸಿ ಬ್ಲ್ಯಾಕ್ ಮೇಲ್ ಮಾಡುತ್ತಿರೋದು ತಿಳಿದುಬಂದಿದೆ ಎಂದು ತಿಳಿಸಿದರು.
Mysuru MLA Harish Gowda honey trap case, two arrested by CCB police. The arrested have been identified as Santosh and putaraju. The accused were into blackmail business of rich people.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm