ಬ್ರೇಕಿಂಗ್ ನ್ಯೂಸ್
26-06-24 06:15 pm HK News Desk ಕ್ರೈಂ
ಮೈಸೂರು, ಜೂನ್ 26: ಮೈಸೂರು ಜಿಲ್ಲೆಯ ಚಾಮರಾಜ ನಗರ ಕ್ಷೇತ್ರದ ಶಾಸಕ ಹರೀಶ್ ಗೌಡ ಮತ್ತು ಇತರ ಪ್ರಭಾವಿಗಳಿಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಎನ್ನುವವರನ್ನ ಬಂಧಿಸಲಾಗಿದೆ. ಯಾರಾದ್ರೂ ವಿಐಪಿಗಳು ಹೊಟೇಲ್ ಬುಕ್ ಮಾಡಿ ಖಾಲಿಯಾದ ಬಳಿಕ ಅದೇ ರೂಮ್ ಪಡೆಯುತ್ತಿದ್ದ ಆರೋಪಿಗಳು ಯುವತಿಯನ್ನು ಬಳಸಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದು ವಿಐಪಿ ವ್ಯಕ್ತಿಗೆ ತೋರಿಸಿ ಬ್ಲಾಕ್ಮೇಲ್ ಮಾಡುತ್ತಿದ್ದರಂತೆ.
ಪ್ರಕರಣದ ಬಗ್ಗೆ ಶಾಸಕ ಹರೀಶ್ ಗೌಡ ಸ್ಪಷ್ಟನೆ ನೀಡಿದ್ದು, ನನ್ನ ಮೇಲೆ ಹನಿಟ್ರ್ಯಾಪ್ ನಡೆದಿಲ್ಲ. ನನ್ನ ಕ್ಷೇತ್ರದ ಹಲವರಿಗೆ ಹನಿಟ್ರ್ಯಾಪ್ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ತನಿಖೆ ಮಾಡಲು ಹೇಳಿದ್ದೆ. ಉದ್ಯಮಿಗಳು, ವಿಐಪಿಗಳು, ಪ್ರೊಫೆಸರ್ಗಳನ್ನೇ ಇವರು ಟಾರ್ಗೆಟ್ ಮಾಡುತ್ತಿದ್ದು ಮೈಸೂರು, ಬೆಂಗಳೂರಿಗೆ ಬಂದಾಗ ಕೃತ್ಯ ಎಸಗುತ್ತಿದ್ದರು. ಈ ಬಗ್ಗೆ ಪೊಲೀಸ್ ಕಮಿಷನರ್ಗೆ, ಸಿಸಿಬಿ ಪೊಲೀಸರಿಗೆ ಅವರ ಮೂಲಕ ದೂರು ಕೊಡಿಸಿದ್ದೆ. ಅದರಂತೆ ಇಬ್ಬರನ್ನ ಬಂಧಿಸಿದ್ದಾರೆ ಅಂತ ಮಾಹಿತಿ ಬಂದಿದೆ ಎಂದು ತಿಳಿಸಿದರು.
ಹನಿಟ್ರ್ಯಾಪ್ ಪ್ರಕರಣದ ಕುರಿತಂತೆ ಮೈಸೂರು ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರು, ಕೆಲವು ದಿನಗಳ ಹಿಂದೆ ಗ್ಯಾಂಗ್ ಒಂದು ಕೆಲವು ಅಂಶಗಳನ್ನು ಮುಂದಿಟ್ಟು ಬ್ಲ್ಯಾಕ್ ಮೇಲ್ ಮಾಡ್ತಿದ್ದಾರೆ ಅಂತ ದೂರು ಬಂದಿತ್ತು. ಪ್ರಕರಣ ದಾಖಲಿಸಿ ಆರೋಪಿಗಳನ್ನ ಬಂಧಿಸಿದ್ದು ಹೇಳಿಕೆಗಳನ್ನ ಪಡೆದುಕೊಂಡಿದ್ದೇವೆ. ಗ್ಯಾಂಗ್ ನಲ್ಲಿ ಇದುವರೆಗೂ ಮೂವರು ಇದ್ದದ್ದು ಪತ್ತೆಯಾಗಿದೆ. ಮತ್ತೊಬ್ಬರು ಪರಾರಿಯಾಗಿದ್ದಾರೆ. ಬೇರೆ ಬೇರೆ ನಂಬರ್ ಗಳನ್ನ ಬಳಸಿ ಬ್ಲ್ಯಾಕ್ ಮೇಲ್ ಮಾಡುತ್ತಿರೋದು ತಿಳಿದುಬಂದಿದೆ ಎಂದು ತಿಳಿಸಿದರು.
Mysuru MLA Harish Gowda honey trap case, two arrested by CCB police. The arrested have been identified as Santosh and putaraju. The accused were into blackmail business of rich people.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm