ಬ್ರೇಕಿಂಗ್ ನ್ಯೂಸ್
26-06-24 06:15 pm HK News Desk ಕ್ರೈಂ
ಮೈಸೂರು, ಜೂನ್ 26: ಮೈಸೂರು ಜಿಲ್ಲೆಯ ಚಾಮರಾಜ ನಗರ ಕ್ಷೇತ್ರದ ಶಾಸಕ ಹರೀಶ್ ಗೌಡ ಮತ್ತು ಇತರ ಪ್ರಭಾವಿಗಳಿಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಎನ್ನುವವರನ್ನ ಬಂಧಿಸಲಾಗಿದೆ. ಯಾರಾದ್ರೂ ವಿಐಪಿಗಳು ಹೊಟೇಲ್ ಬುಕ್ ಮಾಡಿ ಖಾಲಿಯಾದ ಬಳಿಕ ಅದೇ ರೂಮ್ ಪಡೆಯುತ್ತಿದ್ದ ಆರೋಪಿಗಳು ಯುವತಿಯನ್ನು ಬಳಸಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದು ವಿಐಪಿ ವ್ಯಕ್ತಿಗೆ ತೋರಿಸಿ ಬ್ಲಾಕ್ಮೇಲ್ ಮಾಡುತ್ತಿದ್ದರಂತೆ.
ಪ್ರಕರಣದ ಬಗ್ಗೆ ಶಾಸಕ ಹರೀಶ್ ಗೌಡ ಸ್ಪಷ್ಟನೆ ನೀಡಿದ್ದು, ನನ್ನ ಮೇಲೆ ಹನಿಟ್ರ್ಯಾಪ್ ನಡೆದಿಲ್ಲ. ನನ್ನ ಕ್ಷೇತ್ರದ ಹಲವರಿಗೆ ಹನಿಟ್ರ್ಯಾಪ್ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ತನಿಖೆ ಮಾಡಲು ಹೇಳಿದ್ದೆ. ಉದ್ಯಮಿಗಳು, ವಿಐಪಿಗಳು, ಪ್ರೊಫೆಸರ್ಗಳನ್ನೇ ಇವರು ಟಾರ್ಗೆಟ್ ಮಾಡುತ್ತಿದ್ದು ಮೈಸೂರು, ಬೆಂಗಳೂರಿಗೆ ಬಂದಾಗ ಕೃತ್ಯ ಎಸಗುತ್ತಿದ್ದರು. ಈ ಬಗ್ಗೆ ಪೊಲೀಸ್ ಕಮಿಷನರ್ಗೆ, ಸಿಸಿಬಿ ಪೊಲೀಸರಿಗೆ ಅವರ ಮೂಲಕ ದೂರು ಕೊಡಿಸಿದ್ದೆ. ಅದರಂತೆ ಇಬ್ಬರನ್ನ ಬಂಧಿಸಿದ್ದಾರೆ ಅಂತ ಮಾಹಿತಿ ಬಂದಿದೆ ಎಂದು ತಿಳಿಸಿದರು.
ಹನಿಟ್ರ್ಯಾಪ್ ಪ್ರಕರಣದ ಕುರಿತಂತೆ ಮೈಸೂರು ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರು, ಕೆಲವು ದಿನಗಳ ಹಿಂದೆ ಗ್ಯಾಂಗ್ ಒಂದು ಕೆಲವು ಅಂಶಗಳನ್ನು ಮುಂದಿಟ್ಟು ಬ್ಲ್ಯಾಕ್ ಮೇಲ್ ಮಾಡ್ತಿದ್ದಾರೆ ಅಂತ ದೂರು ಬಂದಿತ್ತು. ಪ್ರಕರಣ ದಾಖಲಿಸಿ ಆರೋಪಿಗಳನ್ನ ಬಂಧಿಸಿದ್ದು ಹೇಳಿಕೆಗಳನ್ನ ಪಡೆದುಕೊಂಡಿದ್ದೇವೆ. ಗ್ಯಾಂಗ್ ನಲ್ಲಿ ಇದುವರೆಗೂ ಮೂವರು ಇದ್ದದ್ದು ಪತ್ತೆಯಾಗಿದೆ. ಮತ್ತೊಬ್ಬರು ಪರಾರಿಯಾಗಿದ್ದಾರೆ. ಬೇರೆ ಬೇರೆ ನಂಬರ್ ಗಳನ್ನ ಬಳಸಿ ಬ್ಲ್ಯಾಕ್ ಮೇಲ್ ಮಾಡುತ್ತಿರೋದು ತಿಳಿದುಬಂದಿದೆ ಎಂದು ತಿಳಿಸಿದರು.
Mysuru MLA Harish Gowda honey trap case, two arrested by CCB police. The arrested have been identified as Santosh and putaraju. The accused were into blackmail business of rich people.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm