ಬ್ರೇಕಿಂಗ್ ನ್ಯೂಸ್
26-06-24 11:10 pm Mangalore Correspondent ಕ್ರೈಂ
ಮಂಗಳೂರು, ಜೂ.26: ಉಳ್ಳಾಲ ತಾಲ್ಲೂಕು ಪಾವೂರು ಉಳಿಯದ ಕುದ್ರು ಎಂಬಲ್ಲಿ ಜೂನ್ 21 ರಂದು ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಬಿತ್ತರವಾದ ಸುದ್ದಿಯ ಹಿನ್ನೆಲೆಯಲ್ಲಿ ಕಚೇರಿಯ ಹಿರಿಯ ಭೂ ವಿಜ್ಞಾನಿಗಳನ್ನು ಒಳಗೊಂಡ ತಾಂತ್ರಿಕ ಅಧಿಕಾರಿಗಳ ತಂಡವು ಜೂನ್ 24 ರಂದು ಸದರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಈ ಕುದ್ರುವಿನ ಪೂರ್ವಕ್ಕೆ ಸಾವಯವ ಮಣ್ಣು ಮಿಶ್ರಿತ ಮರಳು ಖಾಲಿಯಾಗಿದ್ದು, ಉಳಿದಂತೆ ಕುದ್ರು ಅಖಂಡವಾಗಿರುವುದು ಕಂಡುಬಂದಿದ್ದು, ಕುದ್ರುವಿನ ಪೂರ್ವಕ್ಕೆ ಇರುವ ಮಣ್ಣು ಕುಸಿಯಲು ಕಾರಣ ಗಿಡ ಮರಗಳ ಅಭಾವ. ಸದರಿ ಪ್ರದೇಶದಲ್ಲಿ ಅರುಗನ್ನು ಹಿಡಿದಿಟ್ಟುಕೊಳ್ಳಲು ಪೂರಕವಾದ ಬೇರು ಬಿಡುವ ಮತ್ತು ಅರುಗನ್ನು ಸಂರಕ್ಷಿಸುವ ಕಾಂಡ್ಲಾ ಗಿಡಗಳು ಇಲ್ಲದಿರುವುದು. ಬಿರುಸಾದ ನೀರಿನ ಹರಿವಿನಿಂದಾಗಿ ಮಣ್ಣು ಕುಸಿದು ಹೋಗಿರುತ್ತದೆ ಮತ್ತು ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಯಾವುದೇ ಅನಧಿಕೃತ ಸಾಮಾನ್ಯ ಮರಳು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದಿರುವುದಿಲ್ಲ.


ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಮರಳು ತೆಗೆಯುವ ದೃಶ್ಯಗಳು ಹಳೆಯದಾಗಿದ್ದು ಮತ್ತು ಸದರಿ ದ್ವೀಪದ ಬಳಿ ಈಚೆಗೆ ಯಾವುದೇ ಮರಳು ತೆಗೆದಿಲ್ಲದೇ ಇರುವುದು ಪ್ರದೇಶದಲ್ಲಿರುವ ಒಣಗಿದ ಮತ್ತು ಸರಿದಿರುವ ಸಾವಯವ ಮಣ್ಣು ಮಿಶ್ರಿತ ಮಣ್ಣಿನ ಮೇಲೆ ಬೆಳೆದಿರುವ ಮಜ್ಜಿಗೆ ಹುಲ್ಲಿನಿಂದ ಖಾತ್ರಿಯಾಗಿರುತ್ತದೆ. ಕಂದಾಯ ಇಲಾಖೆಯ ದಾಖಲೆಯಂತೆ ಸದರಿ ಕುದ್ರುವಿನ ಒಟ್ಟು ವಿಸ್ತೀರ್ಣವು 30.49 ಎಕರೆ ಆಗಿದ್ದು, ಭೌತಿಕವಾಗಿ ಪರಿಶೀಲಿಸಿದಾಗ ಸದರಿ ಕುದ್ರುವಿನ ವಿಸ್ತೀರ್ಣವು 98.02 ಎಕರೆ ಇದ್ದು, ಕುದ್ರುವಿನ ಯಾವುದೇ ಭಾಗವು ನದಿಯಲ್ಲಿ ಮುಳುಗಡೆಗೊಂಡಿರುವುದಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Mines and Geology Department on Wednesday denied charges of illegal sand extraction in and around Pavoor-Uliya Kudru in Netravathi river and the consequent degeneration of the river island.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am