ಬ್ರೇಕಿಂಗ್ ನ್ಯೂಸ್
26-06-24 11:10 pm Mangalore Correspondent ಕ್ರೈಂ
ಮಂಗಳೂರು, ಜೂ.26: ಉಳ್ಳಾಲ ತಾಲ್ಲೂಕು ಪಾವೂರು ಉಳಿಯದ ಕುದ್ರು ಎಂಬಲ್ಲಿ ಜೂನ್ 21 ರಂದು ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಬಿತ್ತರವಾದ ಸುದ್ದಿಯ ಹಿನ್ನೆಲೆಯಲ್ಲಿ ಕಚೇರಿಯ ಹಿರಿಯ ಭೂ ವಿಜ್ಞಾನಿಗಳನ್ನು ಒಳಗೊಂಡ ತಾಂತ್ರಿಕ ಅಧಿಕಾರಿಗಳ ತಂಡವು ಜೂನ್ 24 ರಂದು ಸದರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಈ ಕುದ್ರುವಿನ ಪೂರ್ವಕ್ಕೆ ಸಾವಯವ ಮಣ್ಣು ಮಿಶ್ರಿತ ಮರಳು ಖಾಲಿಯಾಗಿದ್ದು, ಉಳಿದಂತೆ ಕುದ್ರು ಅಖಂಡವಾಗಿರುವುದು ಕಂಡುಬಂದಿದ್ದು, ಕುದ್ರುವಿನ ಪೂರ್ವಕ್ಕೆ ಇರುವ ಮಣ್ಣು ಕುಸಿಯಲು ಕಾರಣ ಗಿಡ ಮರಗಳ ಅಭಾವ. ಸದರಿ ಪ್ರದೇಶದಲ್ಲಿ ಅರುಗನ್ನು ಹಿಡಿದಿಟ್ಟುಕೊಳ್ಳಲು ಪೂರಕವಾದ ಬೇರು ಬಿಡುವ ಮತ್ತು ಅರುಗನ್ನು ಸಂರಕ್ಷಿಸುವ ಕಾಂಡ್ಲಾ ಗಿಡಗಳು ಇಲ್ಲದಿರುವುದು. ಬಿರುಸಾದ ನೀರಿನ ಹರಿವಿನಿಂದಾಗಿ ಮಣ್ಣು ಕುಸಿದು ಹೋಗಿರುತ್ತದೆ ಮತ್ತು ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಯಾವುದೇ ಅನಧಿಕೃತ ಸಾಮಾನ್ಯ ಮರಳು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದಿರುವುದಿಲ್ಲ.


ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಮರಳು ತೆಗೆಯುವ ದೃಶ್ಯಗಳು ಹಳೆಯದಾಗಿದ್ದು ಮತ್ತು ಸದರಿ ದ್ವೀಪದ ಬಳಿ ಈಚೆಗೆ ಯಾವುದೇ ಮರಳು ತೆಗೆದಿಲ್ಲದೇ ಇರುವುದು ಪ್ರದೇಶದಲ್ಲಿರುವ ಒಣಗಿದ ಮತ್ತು ಸರಿದಿರುವ ಸಾವಯವ ಮಣ್ಣು ಮಿಶ್ರಿತ ಮಣ್ಣಿನ ಮೇಲೆ ಬೆಳೆದಿರುವ ಮಜ್ಜಿಗೆ ಹುಲ್ಲಿನಿಂದ ಖಾತ್ರಿಯಾಗಿರುತ್ತದೆ. ಕಂದಾಯ ಇಲಾಖೆಯ ದಾಖಲೆಯಂತೆ ಸದರಿ ಕುದ್ರುವಿನ ಒಟ್ಟು ವಿಸ್ತೀರ್ಣವು 30.49 ಎಕರೆ ಆಗಿದ್ದು, ಭೌತಿಕವಾಗಿ ಪರಿಶೀಲಿಸಿದಾಗ ಸದರಿ ಕುದ್ರುವಿನ ವಿಸ್ತೀರ್ಣವು 98.02 ಎಕರೆ ಇದ್ದು, ಕುದ್ರುವಿನ ಯಾವುದೇ ಭಾಗವು ನದಿಯಲ್ಲಿ ಮುಳುಗಡೆಗೊಂಡಿರುವುದಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Mines and Geology Department on Wednesday denied charges of illegal sand extraction in and around Pavoor-Uliya Kudru in Netravathi river and the consequent degeneration of the river island.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm