ಬ್ರೇಕಿಂಗ್ ನ್ಯೂಸ್
01-07-24 05:27 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 01: ರಿಲ್ಸ್ ಶೋಗಾಗಿ ಶೋಕಿ ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದಾರೆ. ಈತ ಎಕೆ 47 ರೈಫಲ್ ಹಿಡಿದ ಗನ್ ಮ್ಯಾನ್ಗಳನ್ನ ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ನಗರದಲ್ಲಿ ಶೋಕಿ ಮಾಡುತ್ತಿದ್ದ.
ಬೀದಿಬೀದಿಯಲ್ಲಿ ಈತನ ಗನ್ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು.
ಹೀಗೆ ಶೋ ಮಾಡಲು ಹೋಗಿ ಜೈಲು ಸೇರಿರುವ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದಾರೆ.



ಈತ ಬಾಡಿಗಾರ್ಡ್ಸ್ ಇಟ್ಕೊಂಡು, ಅವರ ಕೈಲಿ ಎಕೆ 47 ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಈತನನ್ನ ಬಂಧಿಸಿದ್ದಾರೆ. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿದೆ. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿಕೊಟ್ಟಿದ್ದಾರೆ.
Arun Kathare internet reels star arrested by bangalore police for posing with ak 47 guns and fake gold with bodyguards. Public has complained against him for moving around with guns and bodyguards. Police who arrested him booked him under arms act and has been sent to jail.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 04:18 pm
Mangalore Correspondent
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm