ಬ್ರೇಕಿಂಗ್ ನ್ಯೂಸ್
07-08-20 02:06 pm Headline Karnataka News Network ಕ್ರೈಂ
ಮುಂಬೈ: ಗುರುವಾರಷ್ಟೆ ಬಾಲಿವುಡ್ನ ಕಿರುತೆರೆ ನಟ ಸಮೀರ್ ಶರ್ಮಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದೀಗ ಭೋಜ್ಪುರಿ ನಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಟಿ ಅನುಪಮಾ ಪಾಠಕ್ (40) ಆತ್ಮಹತ್ಯೆ ಮಾಡಿಕೊಂಡ ನಟಿ. ಮುಂಬೈನ ದಹಿಸರ್ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ಆಗಸ್ಟ್ 2 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಒಂದು ದಿನ ಮೊದಲು ಅನುಪಮಾ ಫೇಸ್ಬುಕ್ನಲ್ಲಿ ಲೈವ್ ಬಂದಿದ್ದು, ನನಗೆ ಮೋಸ ಆಗಿದೆ ಮತ್ತು ಯಾರನ್ನೂ ನಂಬಲು ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ಮಾತನಾಡಿದ್ದರು.
“ನೀವು ಕೆಲವು ಸಮಸ್ಯೆಗಳನ್ನು ಎದುರಿಸುತ್ತಿರುವಿರಿ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಯಾರಿಗಾದರೂ ಹೇಳಿದರೆ, ಆ ವ್ಯಕ್ತಿ ಅಥವಾ ಸ್ನೇಹಿತ ಸಮಸ್ಯೆಗಳಿಂದ ದೂರವಿರಲು ಹೇಳುತ್ತಾರೆ. ಆದರೆ ಅವರು ನಿಮ್ಮ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಆದ್ದರಿಂದ ನೀವು ಯಾರಿಗೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಹೇಳಬೇಡಿ. ನಿಮ್ಮ ಸಾವಿನ ನಂತರ ಅವರಿಗೆ ತೊಂದರೆಯಾಗುತ್ತದೆ. ಹೀಗಾಗಿ ನಿಮ್ಮ ಸ್ನೇಹಿತರು ಮತ್ತು ಆತ್ಮೀಯರಿಂದ ದೂರವಿರಿ” ಎಂದು ನೋವಿನಿಂದ ಹೇಳಿದ್ದಾರೆ.
ಅಲ್ಲದೇ, “ಜನರು ನಿಮ್ಮನ್ನು ಗೇಲಿ ಮಾಡುತ್ತಾರೆ ಮತ್ತು ಇತರರ ಮುಂದೆ ನಿಮ್ಮನ್ನು ಅಪಮಾನ ಮಾಡುತ್ತಾರೆ. ಆದ್ದರಿಂದ ನಿಮ್ಮ ಸಮಸ್ಯೆಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಯಾರನ್ನೂ ನಿಮ್ಮ ಸ್ನೇಹಿತ ಎಂದು ಕೂಡ ನಂಬಬೇಡಿ. ನಾನು ಇದನ್ನು ನನ್ನ ಜೀವನದಲ್ಲಿ ಕಲಿತಿದ್ದೇನೆ. ಜನರು ತುಂಬಾ ಸ್ವಾರ್ಥಿಗಳು ಮತ್ತು ಇತರರ ಬಗ್ಗೆ ಕಾಳಜಿ ವಹಿಸುವುದಿಲ್ಲ” ಎಂದು ಆಗಸ್ಟ್ 1 ರಂದು ಫೇಸ್ಬುಕ್ ಲೈವ್ ವೀಡಿಯೊದಲ್ಲಿ ಹೇಳಿದ್ದಾರೆ.
ಫೇಸ್ಬುಕ್ ಲೈವ್ ಬಂದ ಮರುದಿನ ಅಂದರೆ ಆಗಸ್ಟ್ 2 ರಂದು ನಟಿ ಅನುಪಮಾ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ಪೊಲೀಸ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಒಂದು ಡೆತ್ನೋಟ್ ಕೂಡ ಪತ್ತೆಯಾಗಿದೆ.
ನಟಿ ಮಲಾಡ್ನಲ್ಲಿರುವ ಕಂಪನಿಯೊಂದರಲ್ಲಿ ಹಣ ಹೂಡಿಕೆ ಮಾಡಿದ್ದರು. 2019ರ ಡಿಸೆಂಬರ್ನಲ್ಲಿ ಮೆಚ್ಯೂರಿಟಿ ದಿನಾಂಕದ ಮುಗಿದಿದೆ. ಆದರೂ ಅದನ್ನು ವಾಪಸ್ ಕೊಟ್ಟಿಲ್ಲ. ಅಲ್ಲದೇ ಸ್ನೇಹಿತನೊಬ್ಬ ಲಾಕ್ಡೌನ್ ಸಮಯದಲ್ಲಿ ಬೈಕ್ ತೆಗೆದುಕೊಂಡು ಹೋಗಿದ್ದನು. ಅದನ್ನು ವಾಪಸ್ ಕೊಟ್ಟಿಲ್ಲ ಎಂದು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಭೋಜ್ಪುರಿ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟಿ ಅನುಪಮಾ ನಟಿಸಿದ್ದಾರೆ. ಅನುಪಮಾ ಪಾಠಕ್ ಬಿಹಾರದ ಪೂರ್ನಿಯಾ ಜಿಲ್ಲೆಯವರಾಗಿದ್ದು, ಕೆಲಸಕ್ಕಾಗಿ ಮುಂಬೈನಲ್ಲಿ ನೆಲೆಸಿದ್ದರು. ಸದ್ಯಕ್ಕೆ ಪೊಲೀಸರಿಗೆ ಈ ಕುರಿತು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm