ಬ್ರೇಕಿಂಗ್ ನ್ಯೂಸ್
11-07-24 04:24 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 11: ಬ್ಲ್ಯಾಕ್ ಮೇಲ್ ಪ್ರಕರಣದಲ್ಲಿ ಸಿಕ್ಕಿಬಿದ್ದು ತಲೆಮರೆಸಿಕೊಂಡಿದ್ದ ಟಿವಿ ಆಂಕರ್ ದಿವ್ಯಾ ವಸಂತಾಳನ್ನು ಬೆಂಗಳೂರಿನ ಜೀವನ್ ಭೀಮಾ ನಗರ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
ದಿವ್ಯಾ ವಸಂತ ಮತ್ತು ಗ್ಯಾಂಗ್ ಇಂದಿರಾನಗರದ ಸ್ಪಾ ಮಾಲೀಕನಿಗೆ ಬೆದರಿಸಿ ಹಣ ಸುಲಿಗೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈಕೆ ತನ್ನ ಸೋದರನ ಬಂಧನ ನಂತರ ತಲೆಮರೆಸಿಕೊಂಡಿದ್ದು ಕೇರಳದಲ್ಲಿರುವ ಮಾಹಿತಿ ಇತ್ತು.
ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯಾ ತಮಿಳುನಾಡು ಮೂಲಕ ಕೇರಳಕ್ಕೆ ತೆರಳಿದ್ದು ಪತ್ತೆಯಾಗಿತ್ತು. ಸದ್ಯ ಕೇರಳದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿರುವ ಜೀವನ್ ಭೀಮಾನಗರ ಪೊಲೀಸರು ಆಕೆಯನ್ನು ವಿಚಾರಣೆ ನಡೆಸುತ್ತಿದ್ದಾರೆ.
ಇಂದಿರಾನಗರದ 'ಸ್ಪಾ' ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣದಲ್ಲಿ ರಾಜ್ ನ್ಯೂಸ್ ಸಿಇಓ ಎನ್ನಲಾದ ರಾಜಾನುಕುಂಟೆ ವೆಂಕಟೇಶ್, ದಿವ್ಯಾಳ ತಮ್ಮ ಸಂದೇಶ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ತಮ್ಮ ಸುಲಿಗೆ ಕೃತ್ಯಗಳಿಗಾಗಿ ವಾಟ್ಸ್ ಆಪ್ನಲ್ಲಿ 'ಸ್ಪೈ ರಿಸರ್ಚ್ ಟೀಂ' ಹೆಸರಿನ ಗ್ರೂಪ್ ಅನ್ನು ವೆಂಕಟೇಶ್ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಗ್ರೂಪ್ನಲ್ಲಿ ತಮ್ಮ ಪ್ಲಾನ್ ಬಗ್ಗೆ ಚರ್ಚಿಸುತ್ತಿದ್ದರು. ಇದೇ ವೇಳೆ, ಇಂತಹದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು ಇದೇ ತಂಡವು ಇಂದಿರಾ ನಗರದ ಮೈಕಲ್ ಪಾಳ್ಯ ಸಮೀಪದ ಸಹರಾ ಇಂಟರ್ ನ್ಯಾಷನಲ್ ಸ್ಪಾದ ವ್ಯವಸ್ಥಾಪಕ ಮಹೇಶ್ ಶೆಟ್ಟಿಗೆ ಬೆದರಿಸಿ 1 ಲಕ್ಷ ರು. ಸುಲಿಗೆ ಮಾಡಿದ್ದು, ಈ ಬಗ್ಗೆ ರಾಜ್ ನ್ಯೂಸ್ ಸಿಇಓ ವೆಂಕಟೇಶ್ ಹಾಗೂ ಇತರರ ವಿರುದ್ಧ ಇಂದಿರಾನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
Bengaluru police have made a significant breakthrough in the ongoing investigation of an extortion case involving the Tree Spa and beauty owner in Indiranagar. Kannada anchor Divya Vasantha, along with several accomplices, has been apprehended in connection with the alleged threats and extortion attempts targeting the manager of the spa near Michal Palya.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm