ಬ್ರೇಕಿಂಗ್ ನ್ಯೂಸ್
11-07-24 04:24 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 11: ಬ್ಲ್ಯಾಕ್ ಮೇಲ್ ಪ್ರಕರಣದಲ್ಲಿ ಸಿಕ್ಕಿಬಿದ್ದು ತಲೆಮರೆಸಿಕೊಂಡಿದ್ದ ಟಿವಿ ಆಂಕರ್ ದಿವ್ಯಾ ವಸಂತಾಳನ್ನು ಬೆಂಗಳೂರಿನ ಜೀವನ್ ಭೀಮಾ ನಗರ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
ದಿವ್ಯಾ ವಸಂತ ಮತ್ತು ಗ್ಯಾಂಗ್ ಇಂದಿರಾನಗರದ ಸ್ಪಾ ಮಾಲೀಕನಿಗೆ ಬೆದರಿಸಿ ಹಣ ಸುಲಿಗೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈಕೆ ತನ್ನ ಸೋದರನ ಬಂಧನ ನಂತರ ತಲೆಮರೆಸಿಕೊಂಡಿದ್ದು ಕೇರಳದಲ್ಲಿರುವ ಮಾಹಿತಿ ಇತ್ತು.
ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯಾ ತಮಿಳುನಾಡು ಮೂಲಕ ಕೇರಳಕ್ಕೆ ತೆರಳಿದ್ದು ಪತ್ತೆಯಾಗಿತ್ತು. ಸದ್ಯ ಕೇರಳದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿರುವ ಜೀವನ್ ಭೀಮಾನಗರ ಪೊಲೀಸರು ಆಕೆಯನ್ನು ವಿಚಾರಣೆ ನಡೆಸುತ್ತಿದ್ದಾರೆ.
ಇಂದಿರಾನಗರದ 'ಸ್ಪಾ' ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣದಲ್ಲಿ ರಾಜ್ ನ್ಯೂಸ್ ಸಿಇಓ ಎನ್ನಲಾದ ರಾಜಾನುಕುಂಟೆ ವೆಂಕಟೇಶ್, ದಿವ್ಯಾಳ ತಮ್ಮ ಸಂದೇಶ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ತಮ್ಮ ಸುಲಿಗೆ ಕೃತ್ಯಗಳಿಗಾಗಿ ವಾಟ್ಸ್ ಆಪ್ನಲ್ಲಿ 'ಸ್ಪೈ ರಿಸರ್ಚ್ ಟೀಂ' ಹೆಸರಿನ ಗ್ರೂಪ್ ಅನ್ನು ವೆಂಕಟೇಶ್ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಗ್ರೂಪ್ನಲ್ಲಿ ತಮ್ಮ ಪ್ಲಾನ್ ಬಗ್ಗೆ ಚರ್ಚಿಸುತ್ತಿದ್ದರು. ಇದೇ ವೇಳೆ, ಇಂತಹದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು ಇದೇ ತಂಡವು ಇಂದಿರಾ ನಗರದ ಮೈಕಲ್ ಪಾಳ್ಯ ಸಮೀಪದ ಸಹರಾ ಇಂಟರ್ ನ್ಯಾಷನಲ್ ಸ್ಪಾದ ವ್ಯವಸ್ಥಾಪಕ ಮಹೇಶ್ ಶೆಟ್ಟಿಗೆ ಬೆದರಿಸಿ 1 ಲಕ್ಷ ರು. ಸುಲಿಗೆ ಮಾಡಿದ್ದು, ಈ ಬಗ್ಗೆ ರಾಜ್ ನ್ಯೂಸ್ ಸಿಇಓ ವೆಂಕಟೇಶ್ ಹಾಗೂ ಇತರರ ವಿರುದ್ಧ ಇಂದಿರಾನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
Bengaluru police have made a significant breakthrough in the ongoing investigation of an extortion case involving the Tree Spa and beauty owner in Indiranagar. Kannada anchor Divya Vasantha, along with several accomplices, has been apprehended in connection with the alleged threats and extortion attempts targeting the manager of the spa near Michal Palya.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 04:18 pm
Mangalore Correspondent
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm