ಬ್ರೇಕಿಂಗ್ ನ್ಯೂಸ್
13-07-24 01:05 pm Mangalore Correspondent ಕ್ರೈಂ
ಬೆಂಗಳೂರು, ಜುಲೈ 13: ವಿವಾಹಿತೆ ಜತೆಗೆ ಅನೈತಿಕ ಸಂಬಂಧ ಹೊಂದಿದ್ದ ದುಷ್ಟನೊಬ್ಬ ತನ್ನ ಖಾಸಗಿ ಕ್ಷಣಗಳಿಗೆ ಮಗು (3) ಅಡ್ಡಿಯಾಗಿದ್ದಕ್ಕೆ ಕೊಂದು ಹಾಕಿದ್ದಾನೆ. ಮಗುವನ್ನು ಹತ್ಯೆ ಮಾಡಿದ್ದಕ್ಕೇ ಪ್ರಿಯಕರನ ವಿರುದ್ಧವೇ ಪ್ರಿಯತಮೆ ದೂರು ನೀಡಿದ್ದಾಳೆ. ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮೂರು ವರ್ಷದ ಅಶ್ವಿನ್ ಕೊಲೆಯಾದ ದುರ್ದೈವಿ ಮಗು. ಅಶ್ವಿನ್ ತಾಯಿ ರಮ್ಯಾ ಎಂಬಾಕೆ ನೀಡಿದ ದೂರಿನ ಮೇರೆಗೆ ಪ್ರಿಯಕರ ಮೈಕೆಲ್ ರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅವಿವಾಹಿತನಾಗಿದ್ದ ಮೈಕೆಲ್ ರಾಜ್ ಬೊಮ್ಮನಹಳ್ಳಿಯ ವಿರಾಟ್ ನಗರದ ನಿವಾಸಿ ಆಗಿದ್ದು, ಗ್ಯಾರೇಜ್ ಅಂಗಡಿಯನ್ನು ಇಟ್ಟುಕೊಂಡಿದ್ದ.
ಇದೇ ಏರಿಯಾ ಸಮೀಪದಲ್ಲಿ ರಮ್ಯ ಬಾಡಿಗೆ ಮನೆಯೊಂದರಲ್ಲಿ ವಾಸಿವಿದ್ದಳು. ರಮ್ಯಾ ಆರು ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದಳು. ಆದರೆ ಒಂದು ವರ್ಷದ ಹಿಂದೆ ದಂಪತಿ ಮಧ್ಯೆ ವೈಮನಸ್ಸು ಉಂಟಾಗಿತ್ತು. ಹೀಗಾಗಿ ಪತಿಯಿಂದ ರಮ್ಯ ದೂರವಾಗಿದ್ದಳು. ಈ ವೇಳೆ ಆರೋಪಿ ಮೈಕೆಲ್ ರಾಜ್ನ ಪರಿಚಯವಾಗಿತ್ತು.
ಪರಿಚಯವು ಕ್ರಮೇಣ ಇಬ್ಬರ ಸಂಬಂಧ ಆತ್ಮೀಯತೆಗೆ ತಿರುಗಿತ್ತು. ಸ್ನೇಹವು ಪ್ರೀತಿಗೆ ತಿರುಗಿತ್ತು. ಕಳೆದ ಆರೇಳು ತಿಂಗಳಿಂದ ರಮ್ಯಾಳ ಮನೆಗೆ ಮೈಕಲ್ ಬಂದು ಹೋಗುತ್ತಿದ್ದ. ಕಳೆದ ಜುಲೈ 6ರಂದು ಮನೆಗೆ ಬಂದಾಗ ಅಶ್ವಿನ್ನನ್ನು ಕಂಡು ಕೋಪಗೊಂಡಿದ್ದ. ತಮ್ಮಿಬ್ಬರ ಸಂಬಂಧಕ್ಕೆ ಮಗು ಅಡ್ಡಿಯಾಗಲಿದೆ ಎಂದು ಭಾವಿಸಿ ಕೆನ್ನೆಗೆ ಹೊಡೆದು, ನಂತರ ಬಾತ್ ರೂಮಿನ ಗೋಡೆಗೆ ತಲೆಯನ್ನು ಗುದ್ದಿ ಊತ ಬರುವಂತೆ ಮಾಡಿದ್ದ.
ಇದನ್ನು ರಮ್ಯಳಿಗೆ ಹೇಳದೆ ಮಾರೆ ಮಾಚಿ ಕಾಲ್ಕಿತ್ತಿದ್ದ. ಇತ್ತ ಮಗುವಿನ ಮೇಲೆ ಹಲ್ಲೆ ಆಗಿರುವ ವಿಷಯ ರಮ್ಯಾಗೆ ತಿಳಿದಿರಲಿಲ್ಲ. ಅದೇ ದಿನ ರಾತ್ರಿ ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮಗು ಅಶ್ವಿನ್ ಮೃತಪಟ್ಟಿದೆ.
The Bengalore police arrested a 30-year-old man after he pushed his girlfriend’s three-year-old child, which allegedly led to a blood clot, causing his death. The baby's 27-year-old mother was away during the incident.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am