ಬ್ರೇಕಿಂಗ್ ನ್ಯೂಸ್
13-07-24 01:05 pm Mangalore Correspondent ಕ್ರೈಂ
ಬೆಂಗಳೂರು, ಜುಲೈ 13: ವಿವಾಹಿತೆ ಜತೆಗೆ ಅನೈತಿಕ ಸಂಬಂಧ ಹೊಂದಿದ್ದ ದುಷ್ಟನೊಬ್ಬ ತನ್ನ ಖಾಸಗಿ ಕ್ಷಣಗಳಿಗೆ ಮಗು (3) ಅಡ್ಡಿಯಾಗಿದ್ದಕ್ಕೆ ಕೊಂದು ಹಾಕಿದ್ದಾನೆ. ಮಗುವನ್ನು ಹತ್ಯೆ ಮಾಡಿದ್ದಕ್ಕೇ ಪ್ರಿಯಕರನ ವಿರುದ್ಧವೇ ಪ್ರಿಯತಮೆ ದೂರು ನೀಡಿದ್ದಾಳೆ. ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮೂರು ವರ್ಷದ ಅಶ್ವಿನ್ ಕೊಲೆಯಾದ ದುರ್ದೈವಿ ಮಗು. ಅಶ್ವಿನ್ ತಾಯಿ ರಮ್ಯಾ ಎಂಬಾಕೆ ನೀಡಿದ ದೂರಿನ ಮೇರೆಗೆ ಪ್ರಿಯಕರ ಮೈಕೆಲ್ ರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅವಿವಾಹಿತನಾಗಿದ್ದ ಮೈಕೆಲ್ ರಾಜ್ ಬೊಮ್ಮನಹಳ್ಳಿಯ ವಿರಾಟ್ ನಗರದ ನಿವಾಸಿ ಆಗಿದ್ದು, ಗ್ಯಾರೇಜ್ ಅಂಗಡಿಯನ್ನು ಇಟ್ಟುಕೊಂಡಿದ್ದ.
ಇದೇ ಏರಿಯಾ ಸಮೀಪದಲ್ಲಿ ರಮ್ಯ ಬಾಡಿಗೆ ಮನೆಯೊಂದರಲ್ಲಿ ವಾಸಿವಿದ್ದಳು. ರಮ್ಯಾ ಆರು ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದಳು. ಆದರೆ ಒಂದು ವರ್ಷದ ಹಿಂದೆ ದಂಪತಿ ಮಧ್ಯೆ ವೈಮನಸ್ಸು ಉಂಟಾಗಿತ್ತು. ಹೀಗಾಗಿ ಪತಿಯಿಂದ ರಮ್ಯ ದೂರವಾಗಿದ್ದಳು. ಈ ವೇಳೆ ಆರೋಪಿ ಮೈಕೆಲ್ ರಾಜ್ನ ಪರಿಚಯವಾಗಿತ್ತು.
ಪರಿಚಯವು ಕ್ರಮೇಣ ಇಬ್ಬರ ಸಂಬಂಧ ಆತ್ಮೀಯತೆಗೆ ತಿರುಗಿತ್ತು. ಸ್ನೇಹವು ಪ್ರೀತಿಗೆ ತಿರುಗಿತ್ತು. ಕಳೆದ ಆರೇಳು ತಿಂಗಳಿಂದ ರಮ್ಯಾಳ ಮನೆಗೆ ಮೈಕಲ್ ಬಂದು ಹೋಗುತ್ತಿದ್ದ. ಕಳೆದ ಜುಲೈ 6ರಂದು ಮನೆಗೆ ಬಂದಾಗ ಅಶ್ವಿನ್ನನ್ನು ಕಂಡು ಕೋಪಗೊಂಡಿದ್ದ. ತಮ್ಮಿಬ್ಬರ ಸಂಬಂಧಕ್ಕೆ ಮಗು ಅಡ್ಡಿಯಾಗಲಿದೆ ಎಂದು ಭಾವಿಸಿ ಕೆನ್ನೆಗೆ ಹೊಡೆದು, ನಂತರ ಬಾತ್ ರೂಮಿನ ಗೋಡೆಗೆ ತಲೆಯನ್ನು ಗುದ್ದಿ ಊತ ಬರುವಂತೆ ಮಾಡಿದ್ದ.
ಇದನ್ನು ರಮ್ಯಳಿಗೆ ಹೇಳದೆ ಮಾರೆ ಮಾಚಿ ಕಾಲ್ಕಿತ್ತಿದ್ದ. ಇತ್ತ ಮಗುವಿನ ಮೇಲೆ ಹಲ್ಲೆ ಆಗಿರುವ ವಿಷಯ ರಮ್ಯಾಗೆ ತಿಳಿದಿರಲಿಲ್ಲ. ಅದೇ ದಿನ ರಾತ್ರಿ ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮಗು ಅಶ್ವಿನ್ ಮೃತಪಟ್ಟಿದೆ.
The Bengalore police arrested a 30-year-old man after he pushed his girlfriend’s three-year-old child, which allegedly led to a blood clot, causing his death. The baby's 27-year-old mother was away during the incident.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm