ಬ್ರೇಕಿಂಗ್ ನ್ಯೂಸ್
14-07-24 04:29 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬುರ್ಖಾ ಧರಿಸಿ ಬಜ್ಪೆಯ ಫೈನಾನ್ಸ್ ಕಚೇರಿಗೆ ನುಗ್ಗಿದ್ದ ಮೂವರಿದ್ದ ತಂಡ ಮಹಿಳೆ ಮೇಲೆ ಆ್ಯಸಿಡ್ ಹಾಕಿ ನಗದು ದರೋಡೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕೆರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತರು.
ಮಂಗಳೂರು ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಫೈನಾನ್ಸ್ ಕಚೇರಿಗೆ ಜು.4ರಂದು ಸಂಜೆ ಬುರ್ಖಾ ಧರಿಸಿ ಬಂದಿದ್ದ ಮೂವರು ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ಕಚೇರಿ ಒಳಗಡೆ ಬಂದು ಆ್ಯಸಿಡ್ ಬಾಟಲಿ ತೋರಿಸಿ ಮಹಿಳಾ ಸಿಬಂದಿಯನ್ನು ಬೆದರಿಸಿದ್ದರು. ಈ ವೇಳೆ, ಮಹಿಳೆ ಕಿರುಚಾಡಿದ್ದು ಕೂಡಲೇ ಹೊರಗೆ ಸ್ಟಾರ್ಟ್ ನಲ್ಲೇ ನಿಲ್ಲಿಸಿದ್ದ ಇನ್ನೊಬ್ಬ ವ್ಯಕ್ತಿಯ ಸ್ಕೂಟರಿನಲ್ಲಿ ಮೂವರು ಪರಾರಿಯಾಗಿದ್ದರು. ಇವರು ಅಲ್ಲಿಂದ ತೆರಳುವುದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಪ್ರೀತೇಶ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ ಒಂದು ಕಳವು ಪ್ರಕರಣ, ಧನರಾಜ್ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎರಡು ಹಾಗೂ ಮೂಡುಬಿದರೆ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ, ಕುಸುಮಾಕರನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳು ಕಳ್ಳತನದಿಂದ ಗಳಿಸಿದ್ದ ಸುಮಾರು 15 ಲಕ್ಷ ರೂ. ಮೌಲ್ಯದ ಇನೋವಾ ಕಾರು, ಸ್ವಿಫ್ಟ್ ಕಾರು ಮತ್ತು ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.
Bajpe police have arrested three individuals and confiscated valuables worth Rs 15 lac from the accused who allegedly wore burqas, poured acid on a woman working at a finance company, and attempted to loot gold ornaments.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am