ಬ್ರೇಕಿಂಗ್ ನ್ಯೂಸ್
14-07-24 04:29 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬುರ್ಖಾ ಧರಿಸಿ ಬಜ್ಪೆಯ ಫೈನಾನ್ಸ್ ಕಚೇರಿಗೆ ನುಗ್ಗಿದ್ದ ಮೂವರಿದ್ದ ತಂಡ ಮಹಿಳೆ ಮೇಲೆ ಆ್ಯಸಿಡ್ ಹಾಕಿ ನಗದು ದರೋಡೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕೆರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತರು.
ಮಂಗಳೂರು ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಫೈನಾನ್ಸ್ ಕಚೇರಿಗೆ ಜು.4ರಂದು ಸಂಜೆ ಬುರ್ಖಾ ಧರಿಸಿ ಬಂದಿದ್ದ ಮೂವರು ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ಕಚೇರಿ ಒಳಗಡೆ ಬಂದು ಆ್ಯಸಿಡ್ ಬಾಟಲಿ ತೋರಿಸಿ ಮಹಿಳಾ ಸಿಬಂದಿಯನ್ನು ಬೆದರಿಸಿದ್ದರು. ಈ ವೇಳೆ, ಮಹಿಳೆ ಕಿರುಚಾಡಿದ್ದು ಕೂಡಲೇ ಹೊರಗೆ ಸ್ಟಾರ್ಟ್ ನಲ್ಲೇ ನಿಲ್ಲಿಸಿದ್ದ ಇನ್ನೊಬ್ಬ ವ್ಯಕ್ತಿಯ ಸ್ಕೂಟರಿನಲ್ಲಿ ಮೂವರು ಪರಾರಿಯಾಗಿದ್ದರು. ಇವರು ಅಲ್ಲಿಂದ ತೆರಳುವುದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಪ್ರೀತೇಶ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ ಒಂದು ಕಳವು ಪ್ರಕರಣ, ಧನರಾಜ್ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎರಡು ಹಾಗೂ ಮೂಡುಬಿದರೆ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ, ಕುಸುಮಾಕರನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳು ಕಳ್ಳತನದಿಂದ ಗಳಿಸಿದ್ದ ಸುಮಾರು 15 ಲಕ್ಷ ರೂ. ಮೌಲ್ಯದ ಇನೋವಾ ಕಾರು, ಸ್ವಿಫ್ಟ್ ಕಾರು ಮತ್ತು ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.
Bajpe police have arrested three individuals and confiscated valuables worth Rs 15 lac from the accused who allegedly wore burqas, poured acid on a woman working at a finance company, and attempted to loot gold ornaments.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 09:32 pm
HK News Desk
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm