ಬ್ರೇಕಿಂಗ್ ನ್ಯೂಸ್
14-07-24 07:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮದ್ರಸಾ ಶಿಕ್ಷಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಬಸ್ಸಿನಲ್ಲಿದ್ದ ಮಹಿಳೆಯರೇ ಸೇರಿ ಆತನಿಗೆ ಗೂಸಾ ನೀಡಿದ್ದಾರೆ.
ಮಹಿಳೆಯರಿದ್ದ ಕುಟುಂಬವೊಂದು ಶನಿವಾರ ಸಂಜೆ ಧರ್ಮಸ್ಥಳಕ್ಕೆ ತೆರಳುವುದಕ್ಕಾಗಿ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಂದಿತ್ತು. ಈ ವೇಳೆ, ಬಸ್ ಹಾಸನ ತಲುಪಿದಾಗ ಉಸ್ತಾದ್ ಬಸ್ ಹತ್ತಿದ್ದು ಬಾಲಕಿ ಬಳಿಯಲ್ಲೇ ಕುಳಿತುಕೊಂಡಿದ್ದ. ಬಸ್ಸು ಸಕಲೇಶಪುರ ಘಾಟ್ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನರಿತ ಬಾಲಕಿ ತಾಯಿ ಉಸ್ತಾದ್ ನನ್ನು ಪ್ರಶ್ನೆ ಮಾಡಿದ್ದು ನನ್ನನ್ನು ಮುಟ್ಟಿ ನೋಡು, ಏನಾ ನಿಂಗೆ ಅಂತ ಹಲ್ಲೆಗೆ ಮುಂದಾಗಿದ್ದಾರೆ. ಇದೇ ವೇಳೆ, ಇತರ ಮಹಿಳಾ ಪ್ರಯಾಣಿಕರು ಸೇರಿಕೊಂಡು ಮುಖಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ.

ಮಹಿಳೆಯರು ಗೂಸಾ ನೀಡಿದ ಘಟನೆಯ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮಂಗಳೂರು ಬರುತ್ತಿದ್ದ ಬಸ್ಸಿನಲ್ಲಿ ಬಂದಿದ್ದ ಬಾಲಕಿಯ ಕುಟುಂಬ, ಬಸ್ ಗುಂಡ್ಯ ತಲುಪುತ್ತಿದ್ದಂತೆ ಇಳಿದಿದ್ದಾರೆ. ಆ ಕುಟುಂಬವನ್ನು ಬೆಂಬಲಿಸಿದ ಬಂಟ್ವಾಳ ಮತ್ತು ಶಿವಮೊಗ್ಗದ ಯುವಕರನ್ನು ದುರುಗುಟ್ಟಿದ್ದು ಈ ಬಗ್ಗೆ ಯುವಕರು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಬಸ್ ಉಪ್ಪಿನಂಗಡಿ ತಲುಪುತ್ತಲೇ ಉಸ್ತಾದ್ ಬಸ್ಸಿನಿಂದ ಇಳಿದು ಹೋಗಿದ್ದಾನೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಆದರೆ ಗೂಸಾ ನೀಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore Puttur Sexual harassment of girl on KSRTC bus Passengers assault accused, video goes viral on social media.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 04:18 pm
Mangalore Correspondent
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm